ನವದೆಹಲಿ: ನೇಮಕಾತಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ‘ಮೋದಿ ಅವರದ್ದು ಕನಿಷ್ಠ ಸರ್ಕಾರ, ಗರಿಷ್ಠ ಖಾಸಗೀಕರಣದ ಚಿಂತನೆಯಾಗಿದೆ’ ಎಂದು ಟೀಕಿಸಿದ್ದಾರೆ.
ಕೊವಿಡ್–19 ನೆಪ ಹೇಳಿಕೊಂಡು ಸರ್ಕಾರಿ ಕಚೇರಿಗಳನ್ನು ಕಾಯಂ ಸಿಬ್ಬಂದಿಯಿಂದ ‘ಮುಕ್ತ’ಗೊಳಿಸುವ ಉದ್ದೇಶ ಇದ್ದಂತಿದೆ ಎಂದು ಅವರು ಟ್ವೀಟ್ನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಪತ್ರಿಕೆಯೊಂದರ ವರದಿಯನ್ನು ಅವರು ಟ್ಯಾಗ್ ಮಾಡಿದ್ದಾರೆ.
‘ಯುವಕರ ಭವಿಷ್ಯವನ್ನು ಕಸಿದುಕೊಳ್ಳುವುದರ ಜತೆಗೆ ತನ್ನ ಸ್ನೇಹಿತರನ್ನು ಉತ್ತೇಜಿಸುವುದು ಇದರ ಹಿಂದಿನ ಉದ್ದೇಶವಾಗಿದೆ’ ಎಂದು ಅವರು ಪ್ರಧಾನಿಯನ್ನು ಗುರಿಯಾಗಿಸಿ ಟ್ವೀಟ್ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ಧ್ವನಿಯೆತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.