<p><strong>ನವದೆಹಲಿ:</strong> ದೇಶದಲ್ಲಿ ಆಗಸ್ಟ್ ತಿಂಗಳಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವ ಕುರಿತ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ನರೇಂದ್ರ ಮೋದಿ ಸರ್ಕಾರ ಉದ್ಯೋಗಕ್ಕೆ ಮಾರಕವಾಗಿದೆ‘ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಆಗಸ್ಟ್ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ(ಸಿಎಂಐಇ) ದತ್ತಾಂಶ ಆಧರಿಸಿ ಪ್ರಕಟಿಸಿರುವ ಮಾಧ್ಯಮದ ವರದಿಯ ಸ್ಕ್ರೀನ್ ಶಾಟ್ ಅನ್ನು ಟ್ಯಾಗ್ ಮಾಡಿದ್ದಾರೆ.</p>.<p>‘ಉದ್ಯೋಗದ ವಿಷಯದಲ್ಲಿ ಮೋದಿ ಸರ್ಕಾರ ಮಾರಕವಾಗಿದೆ. ಈ ಸರ್ಕಾರ ‘ತನ್ನ ಸ್ನೇಹಿತರಿಗೆ‘ ಸಂಬಂಧವಿರದ ಯಾವುದೇ ವ್ಯಾಪಾರ, ಉದ್ಯೋಗವನ್ನು ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದೂ ಇಲ್ಲ. ಬದಲಿಗೆ, ಬೇರೆಯವರಿಂದ ಉದ್ಯೋಗವನ್ನು ಕಿತ್ತು ಕೊಳ್ಳಲು ಪ್ರಯತ್ನಿಸುತ್ತಿದೆ‘ ಎಂದು ರಾಹುಲ್ ಆರೋಪಿಸಿದ್ದಾರೆ.</p>.<p>‘ತೋರಿಕೆಗಾಗಿ ಸರ್ಕಾರ ದೇಶದ ಜನರಿಂದ ಸ್ವಾಭಿಮಾನವನ್ನು ನಿರೀಕ್ಷಿಸುತ್ತಿದೆ‘ ಎಂದು ಟ್ವೀಟ್ ಮಾಡಿರುವ ರಾಹುಲ್, ‘ಇದನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ನೀಡಲಾಗಿದೆ‘ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಆಗಸ್ಟ್ ತಿಂಗಳಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವ ಕುರಿತ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ನರೇಂದ್ರ ಮೋದಿ ಸರ್ಕಾರ ಉದ್ಯೋಗಕ್ಕೆ ಮಾರಕವಾಗಿದೆ‘ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಆಗಸ್ಟ್ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ(ಸಿಎಂಐಇ) ದತ್ತಾಂಶ ಆಧರಿಸಿ ಪ್ರಕಟಿಸಿರುವ ಮಾಧ್ಯಮದ ವರದಿಯ ಸ್ಕ್ರೀನ್ ಶಾಟ್ ಅನ್ನು ಟ್ಯಾಗ್ ಮಾಡಿದ್ದಾರೆ.</p>.<p>‘ಉದ್ಯೋಗದ ವಿಷಯದಲ್ಲಿ ಮೋದಿ ಸರ್ಕಾರ ಮಾರಕವಾಗಿದೆ. ಈ ಸರ್ಕಾರ ‘ತನ್ನ ಸ್ನೇಹಿತರಿಗೆ‘ ಸಂಬಂಧವಿರದ ಯಾವುದೇ ವ್ಯಾಪಾರ, ಉದ್ಯೋಗವನ್ನು ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದೂ ಇಲ್ಲ. ಬದಲಿಗೆ, ಬೇರೆಯವರಿಂದ ಉದ್ಯೋಗವನ್ನು ಕಿತ್ತು ಕೊಳ್ಳಲು ಪ್ರಯತ್ನಿಸುತ್ತಿದೆ‘ ಎಂದು ರಾಹುಲ್ ಆರೋಪಿಸಿದ್ದಾರೆ.</p>.<p>‘ತೋರಿಕೆಗಾಗಿ ಸರ್ಕಾರ ದೇಶದ ಜನರಿಂದ ಸ್ವಾಭಿಮಾನವನ್ನು ನಿರೀಕ್ಷಿಸುತ್ತಿದೆ‘ ಎಂದು ಟ್ವೀಟ್ ಮಾಡಿರುವ ರಾಹುಲ್, ‘ಇದನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ನೀಡಲಾಗಿದೆ‘ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>