<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್ 14ರ ವರೆಗೆ ದೇಶದಾದ್ಯಂತ ಬೃಹತ್ ಪ್ರಚಾರಾಂದೋಲನ ಹಮ್ಮಿಕೊಂಡಿದೆ.</p>.<p>‘ಕೇಂದ್ರದ ಎಲ್ಲ ಸಚಿವರು, ಬಿಜೆಪಿ ನೇತೃತ್ವದ ರಾಜ್ಯಗಳ ಮಂತ್ರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಮಾಹಿತಿ ನೀಡುವರು’ ಎಂದುಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೋವಿಡ್ನಿಂದಾಗಿ ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ಮೋದಿ ಅವರು ಮೇ 30ರಂದು ಪರಿಹಾರಧನದ ಚೆಕ್ಗಳನ್ನು ವಿತರಿಸುವರು. ಅವರಿಗೆ ವಿದ್ಯಾರ್ಥಿವೇತನವನ್ನು ಅದೇ ದಿನ ಘೋಷಿಸುವರು’ ಎಂದು ತಿಳಿಸಿದರು.</p>.<p>‘ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳು ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಾಗಿವೆ. ಈ ಬಗ್ಗೆ ದೇಶದ ಪ್ರತಿ ಪ್ರಜೆಗೂ ಮಾಹಿತಿ ನೀಡಲು ಪ್ರಚಾರಾಂದೋಲನ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಈ ಅವಧಿಯಲ್ಲಿ ಬೂತ್ನಿಂದ ರಾಷ್ಟ್ರ ಮಟ್ಟದ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕೇಂದ್ರದ ಹಾಗೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳ ಸಚಿವರು ಗ್ರಾಮಗಳಿಗೆ ಭೇಟಿ ನೀಡುವರು’ ಎಂದೂ ಹೇಳಿದರು.</p>.<p>‘ರೈತರು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಪ್ರತಿ ವರ್ಗಕ್ಕೂ ಒಂದು ದಿನ ಮೀಸಲಿರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್ 14ರ ವರೆಗೆ ದೇಶದಾದ್ಯಂತ ಬೃಹತ್ ಪ್ರಚಾರಾಂದೋಲನ ಹಮ್ಮಿಕೊಂಡಿದೆ.</p>.<p>‘ಕೇಂದ್ರದ ಎಲ್ಲ ಸಚಿವರು, ಬಿಜೆಪಿ ನೇತೃತ್ವದ ರಾಜ್ಯಗಳ ಮಂತ್ರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಮಾಹಿತಿ ನೀಡುವರು’ ಎಂದುಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೋವಿಡ್ನಿಂದಾಗಿ ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ಮೋದಿ ಅವರು ಮೇ 30ರಂದು ಪರಿಹಾರಧನದ ಚೆಕ್ಗಳನ್ನು ವಿತರಿಸುವರು. ಅವರಿಗೆ ವಿದ್ಯಾರ್ಥಿವೇತನವನ್ನು ಅದೇ ದಿನ ಘೋಷಿಸುವರು’ ಎಂದು ತಿಳಿಸಿದರು.</p>.<p>‘ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳು ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಾಗಿವೆ. ಈ ಬಗ್ಗೆ ದೇಶದ ಪ್ರತಿ ಪ್ರಜೆಗೂ ಮಾಹಿತಿ ನೀಡಲು ಪ್ರಚಾರಾಂದೋಲನ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಈ ಅವಧಿಯಲ್ಲಿ ಬೂತ್ನಿಂದ ರಾಷ್ಟ್ರ ಮಟ್ಟದ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕೇಂದ್ರದ ಹಾಗೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳ ಸಚಿವರು ಗ್ರಾಮಗಳಿಗೆ ಭೇಟಿ ನೀಡುವರು’ ಎಂದೂ ಹೇಳಿದರು.</p>.<p>‘ರೈತರು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಪ್ರತಿ ವರ್ಗಕ್ಕೂ ಒಂದು ದಿನ ಮೀಸಲಿರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>