ನವದೆಹಲಿ: ಕೃಷಿ ಕಾಯ್ದೆಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತು ರೈತರ ಮುಖಂಡರ ನಡುವಣ 10ನೇ ಸುತ್ತಿನ ಮಾತುಕತೆ ಮುಂದುವರಿದಿದೆ. ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ರೈತ ಮುಖಂಡರ ಮುಂದಿಟ್ಟಿದೆ. ಆದರೆ, ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಅವರು ಪಟ್ಟುಹಿಡಿದಿದ್ದಾರೆ.