<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ‘ಮೂಲಭೂತ ನಿಯಮಗಳು–1922’ಕ್ಕೆ ತಿದ್ದುಪಡಿ ತಂದಿದ್ದು, ಈ ನಿಯಮಗಳ ವ್ಯಾಪ್ತಿಯಿಂದ ವಿದೇಶಾಂಗ ಕಾರ್ಯದರ್ಶಿಯ ಹುದ್ದೆಯನ್ನು ತೆಗೆದುಹಾಕಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಯ ಅಧಿಕಾರದ ಅವಧಿಯನ್ನು ಎರಡರಿಂದ ಐದು ವರ್ಷಗಳಿಗೆ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸಿದ ಮರುದಿನವೇ, ಈ ತಿದ್ದುಪಡಿ ತಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.</p>.<p>ಈ ಸಂಬಂಧ ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಆದರೆ, ಬದಲಾವಣೆ ತಂದಿರುವುದರ ಉದ್ದೇಶ ಏನು ಎಂಬುದನ್ನು ಅಧಿಸೂಚನೆಯಲ್ಲಿ ವಿವರಿಸಿಲ್ಲ.</p>.<p>‘ವಿದೇಶಾಂಗ ಕಾರ್ಯದರ್ಶಿಯ ಹುದ್ದೆಯು ಭಾರತೀಯ ವಿದೇಶಾಂಗ ಸೇವಾ ನಿಯಮಗಳ ವ್ಯಾಪ್ತಿಯಲ್ಲಿ ಬರುತ್ತದೆ. ಹೀಗಾಗಿ ಆ ಹುದ್ದೆಯನ್ನು ಮೂಲಭೂತ ನಿಯಮಗಳ ವ್ಯಾಪ್ತಿಯಿಂದ ತೆಗೆದುಹಾಕಲಾಗಿದೆ’ ಎಂದು ಸಚಿವಾಲಯದ ಮೂಲಗಳು ಹೇಳಿವೆ. ಆದರೆ ಇಂತಹುದೇ ಸೇವಾ ನಿಯಮಗಳ ವ್ಯಾಪ್ತಿಯಲ್ಲಿ ಬರುವ ಗೃಹ ಕಾರ್ಯದರ್ಶಿ ಮತ್ತು ರಕ್ಷಣಾ ಕಾರ್ಯದರ್ಶಿ ಹುದ್ದೆಗಳು, ಮೂಲಭೂತ ನಿಯಮಗಳ ವ್ಯಾಪ್ತಿಯಲ್ಲಿಯೂ ಬರುತ್ತವೆ. ಈ ಎರಡೂ ಹುದ್ದೆಗಳನ್ನು ಮೂಲಭೂತ ನಿಯಮಗಳ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಲಾಗಿದೆ.</p>.<p><strong>ಅವಧಿ ವಿಸ್ತರಣೆ</strong></p>.<p>ರಕ್ಷಣಾ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಗುಪ್ತಚರ ಇಲಾಖೆ ನಿರ್ದೇಶಕ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಕಾರ್ಯದರ್ಶಿ, ಸಿಬಿಐ ನಿರ್ದೇಶಕ ಮತ್ತು ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರದ ಅವಧಿಯನ್ನು ವಿಸ್ತರಿಸಲು ಅವಕಾಶ ಮಾಡಿಕೊಡುವಂತೆ ಮೂಲಭೂತ ನಿಯಮಗಳು–1922ಕ್ಕೆ ಇದೇ ಅಧಿಸೂಚನೆಯಲ್ಲಿ ತಿದ್ದುಪಡಿ ತರಲಾಗಿದೆ.</p>.<p>‘ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಈ ಹುದ್ದೆಗಳ ಅಧಿಕಾರದ ಅವಧಿಯನ್ನು ವಿಸ್ತರಿಸಬಹುದು’ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.</p>.<p><strong>ಅಧಿವೇಶನದಲ್ಲಿ ಪ್ರಸ್ತಾಪಕ್ಕೆ ಸಿದ್ಧತೆ</strong></p>.<p>ಸಂಸತ್ತಿನ ಅಧಿವೇಶನ ಆರಂಭವಾಗಲು ಎರಡು ವಾರವಷ್ಟೇ ಇರುವಾಗ ಸುಗ್ರೀವಾಜ್ಞೆ ಮೂಲಕ ಸಿಬಿಐ ಮತ್ತು ಇ.ಡಿ. ನಿರ್ದೇಶಕರ ಅಧಿಕಾರದ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸಂಸತ್ತಿನಲ್ಲಿ ಪ್ರಶ್ನಿಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ.</p>.<p>‘ಇನ್ನೆರಡು ವಾರಗಳಲ್ಲಿ ಸಂಸತ್ತಿನ ಅಧಿವೇಶನ ಆರಂಭವಾಗಲಿದೆ. ಭಾರತವು ಚುನಾಯಿತ ನಿರಂಕುಶ ಪ್ರಭುತ್ವವಾಗುವುದನ್ನು ತಡೆಯಲು ಏನು ಬೇಕೋ ಅವೆಲ್ಲವನ್ನೂ ವಿರೋಧ ಪಕ್ಷಗಳು ಮಾಡುತ್ತವೆ ಎಂಬ ಭರವಸೆ ನೀಡುತ್ತೇನೆ’ ಎಂದು ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ. ಈ ಸುಗ್ರೀವಾಜ್ಞೆಗಳ ವಿರುದ್ಧ ರಾಜ್ಯಸಭೆಯಲ್ಲಿ ನಿರ್ಣಯ ಮಂಡಿಸುವುದಾಗಿ ಟಿಎಂಸಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ‘ಮೂಲಭೂತ ನಿಯಮಗಳು–1922’ಕ್ಕೆ ತಿದ್ದುಪಡಿ ತಂದಿದ್ದು, ಈ ನಿಯಮಗಳ ವ್ಯಾಪ್ತಿಯಿಂದ ವಿದೇಶಾಂಗ ಕಾರ್ಯದರ್ಶಿಯ ಹುದ್ದೆಯನ್ನು ತೆಗೆದುಹಾಕಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಯ ಅಧಿಕಾರದ ಅವಧಿಯನ್ನು ಎರಡರಿಂದ ಐದು ವರ್ಷಗಳಿಗೆ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸಿದ ಮರುದಿನವೇ, ಈ ತಿದ್ದುಪಡಿ ತಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.</p>.<p>ಈ ಸಂಬಂಧ ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಆದರೆ, ಬದಲಾವಣೆ ತಂದಿರುವುದರ ಉದ್ದೇಶ ಏನು ಎಂಬುದನ್ನು ಅಧಿಸೂಚನೆಯಲ್ಲಿ ವಿವರಿಸಿಲ್ಲ.</p>.<p>‘ವಿದೇಶಾಂಗ ಕಾರ್ಯದರ್ಶಿಯ ಹುದ್ದೆಯು ಭಾರತೀಯ ವಿದೇಶಾಂಗ ಸೇವಾ ನಿಯಮಗಳ ವ್ಯಾಪ್ತಿಯಲ್ಲಿ ಬರುತ್ತದೆ. ಹೀಗಾಗಿ ಆ ಹುದ್ದೆಯನ್ನು ಮೂಲಭೂತ ನಿಯಮಗಳ ವ್ಯಾಪ್ತಿಯಿಂದ ತೆಗೆದುಹಾಕಲಾಗಿದೆ’ ಎಂದು ಸಚಿವಾಲಯದ ಮೂಲಗಳು ಹೇಳಿವೆ. ಆದರೆ ಇಂತಹುದೇ ಸೇವಾ ನಿಯಮಗಳ ವ್ಯಾಪ್ತಿಯಲ್ಲಿ ಬರುವ ಗೃಹ ಕಾರ್ಯದರ್ಶಿ ಮತ್ತು ರಕ್ಷಣಾ ಕಾರ್ಯದರ್ಶಿ ಹುದ್ದೆಗಳು, ಮೂಲಭೂತ ನಿಯಮಗಳ ವ್ಯಾಪ್ತಿಯಲ್ಲಿಯೂ ಬರುತ್ತವೆ. ಈ ಎರಡೂ ಹುದ್ದೆಗಳನ್ನು ಮೂಲಭೂತ ನಿಯಮಗಳ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಲಾಗಿದೆ.</p>.<p><strong>ಅವಧಿ ವಿಸ್ತರಣೆ</strong></p>.<p>ರಕ್ಷಣಾ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಗುಪ್ತಚರ ಇಲಾಖೆ ನಿರ್ದೇಶಕ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಕಾರ್ಯದರ್ಶಿ, ಸಿಬಿಐ ನಿರ್ದೇಶಕ ಮತ್ತು ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರದ ಅವಧಿಯನ್ನು ವಿಸ್ತರಿಸಲು ಅವಕಾಶ ಮಾಡಿಕೊಡುವಂತೆ ಮೂಲಭೂತ ನಿಯಮಗಳು–1922ಕ್ಕೆ ಇದೇ ಅಧಿಸೂಚನೆಯಲ್ಲಿ ತಿದ್ದುಪಡಿ ತರಲಾಗಿದೆ.</p>.<p>‘ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಈ ಹುದ್ದೆಗಳ ಅಧಿಕಾರದ ಅವಧಿಯನ್ನು ವಿಸ್ತರಿಸಬಹುದು’ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.</p>.<p><strong>ಅಧಿವೇಶನದಲ್ಲಿ ಪ್ರಸ್ತಾಪಕ್ಕೆ ಸಿದ್ಧತೆ</strong></p>.<p>ಸಂಸತ್ತಿನ ಅಧಿವೇಶನ ಆರಂಭವಾಗಲು ಎರಡು ವಾರವಷ್ಟೇ ಇರುವಾಗ ಸುಗ್ರೀವಾಜ್ಞೆ ಮೂಲಕ ಸಿಬಿಐ ಮತ್ತು ಇ.ಡಿ. ನಿರ್ದೇಶಕರ ಅಧಿಕಾರದ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸಂಸತ್ತಿನಲ್ಲಿ ಪ್ರಶ್ನಿಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ.</p>.<p>‘ಇನ್ನೆರಡು ವಾರಗಳಲ್ಲಿ ಸಂಸತ್ತಿನ ಅಧಿವೇಶನ ಆರಂಭವಾಗಲಿದೆ. ಭಾರತವು ಚುನಾಯಿತ ನಿರಂಕುಶ ಪ್ರಭುತ್ವವಾಗುವುದನ್ನು ತಡೆಯಲು ಏನು ಬೇಕೋ ಅವೆಲ್ಲವನ್ನೂ ವಿರೋಧ ಪಕ್ಷಗಳು ಮಾಡುತ್ತವೆ ಎಂಬ ಭರವಸೆ ನೀಡುತ್ತೇನೆ’ ಎಂದು ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ. ಈ ಸುಗ್ರೀವಾಜ್ಞೆಗಳ ವಿರುದ್ಧ ರಾಜ್ಯಸಭೆಯಲ್ಲಿ ನಿರ್ಣಯ ಮಂಡಿಸುವುದಾಗಿ ಟಿಎಂಸಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>