ಲಖನೌ: ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಮತ್ತು ಹಣದುಬ್ಬರ ದೇಶಕ್ಕೆ ಹಾನಿಕಾರಕವಾಗಿ ಪರಿಣಮಿಸಿದೆ ಎಂದು ಟೀಕಿಸಿದೆ.
‘ಮೋದಿ ಹೇ ತೋ ಮೆಹೆಂಗಾಯಿ ಹೈ (ಮೋದಿ ಇದ್ದಲ್ಲಿ ಹಣದುಬ್ಬರ ಇದೆ)’ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್ ವ್ಯಂಗ್ಯವಾಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆಯನ್ನು ‘ಗಬ್ಬರ್ ಸಿಂಗ್ ಟ್ಯಾಕ್ಸ್’ ಎಂದು ಅವರು ಟೀಕಿಸಿದ್ದಾರೆ.
ಆರ್ಥಿಕ ಹಿಂಜರಿತ, ನಿರುದ್ಯೋಗ ಹಾಗೂ ಹಣದುಬ್ಬರವೇ ಬಡ ಜನರಿಗೆ ಮೋದಿ ಸರ್ಕಾರದ ಹೊಸ ವರ್ಷದ ಕೊಡುಗೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 2ರಷ್ಟಿತ್ತು. 2021ರಲ್ಲಿ ಶೇ 10ಕ್ಕೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.