<p class="title"><strong>ನವದೆಹಲಿ:</strong> ಕೊರೊನಾ ವೈರಸ್ನ ರೂಪಾಂತರಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರವು ರಚಿಸಿರುವ ಉನ್ನತ ವೈಜ್ಞಾನಿಕ ಸಲಹೆಗಾರರ ವೇದಿಕೆಯ ಅಧ್ಯಕ್ಷ ಸ್ಥಾನಕ್ಕೆ ವೈರಾಣು ತಜ್ಞ ಡಾ.ಶಾಹೀದ್ ಜಮೀಲ್ ಅವರು ರಾಜೀನಾಮೆ ನೀಡಿರುವ ಕುರಿತು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದೆ.</p>.<p class="title">‘ದೇಶದ ಅತ್ಯುತ್ತಮ ವೈರಾಣು ತಜ್ಞರಲ್ಲೊಬ್ಬರಾಗಿದ್ದ ಡಾ. ಶಾಹೀದ್ ಜಮೀಲ್ ಅವರು ರಾಜೀನಾಮೆ ಸಲ್ಲಿಸಿರುವುದು ನೋವಿನ ಸಂಗತಿ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದಲ್ಲಿ ಭಯವಿಲ್ಲದೆ ಮುಕ್ತವಾಗಿ ಮಾತನಾಡುವ ವೃತ್ತಿಪರರಿಗೆ ಸ್ಥಾನವಿಲ್ಲ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p class="title">‘ದಿ ನ್ಯೂಯಾರ್ಕ್ ಟೈಮ್ಸ್’ ನಲ್ಲಿ ಡಾ. ಶಾಹೀದ್ ಜಮೀಲ್ ಅವರು ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಲೇಖನವೊಂದನ್ನು ಬರೆದಿದ್ದರು. ಈ ಲೇಖನ ಪ್ರಕಟವಾದ ಕೆಲವೇ ದಿನಗಳಲ್ಲಿ ಜಮೀಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.</p>.<p class="title">‘ಭಾರತದಲ್ಲಿ ಸಾಕ್ಷ್ಯ ಆಧಾರಿತ ನೀತಿ ನಿರೂಪಣೆಗೆ ಪ್ರತಿರೋಧವನ್ನು ಎದುರಿಸಲಾಗುತ್ತಿದೆ’ ಎಂದು ಜಮೀಲ್ ಅವರು ತಮ್ಮ ಲೇಖನದಲ್ಲಿ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೊರೊನಾ ವೈರಸ್ನ ರೂಪಾಂತರಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರವು ರಚಿಸಿರುವ ಉನ್ನತ ವೈಜ್ಞಾನಿಕ ಸಲಹೆಗಾರರ ವೇದಿಕೆಯ ಅಧ್ಯಕ್ಷ ಸ್ಥಾನಕ್ಕೆ ವೈರಾಣು ತಜ್ಞ ಡಾ.ಶಾಹೀದ್ ಜಮೀಲ್ ಅವರು ರಾಜೀನಾಮೆ ನೀಡಿರುವ ಕುರಿತು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದೆ.</p>.<p class="title">‘ದೇಶದ ಅತ್ಯುತ್ತಮ ವೈರಾಣು ತಜ್ಞರಲ್ಲೊಬ್ಬರಾಗಿದ್ದ ಡಾ. ಶಾಹೀದ್ ಜಮೀಲ್ ಅವರು ರಾಜೀನಾಮೆ ಸಲ್ಲಿಸಿರುವುದು ನೋವಿನ ಸಂಗತಿ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದಲ್ಲಿ ಭಯವಿಲ್ಲದೆ ಮುಕ್ತವಾಗಿ ಮಾತನಾಡುವ ವೃತ್ತಿಪರರಿಗೆ ಸ್ಥಾನವಿಲ್ಲ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p class="title">‘ದಿ ನ್ಯೂಯಾರ್ಕ್ ಟೈಮ್ಸ್’ ನಲ್ಲಿ ಡಾ. ಶಾಹೀದ್ ಜಮೀಲ್ ಅವರು ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಲೇಖನವೊಂದನ್ನು ಬರೆದಿದ್ದರು. ಈ ಲೇಖನ ಪ್ರಕಟವಾದ ಕೆಲವೇ ದಿನಗಳಲ್ಲಿ ಜಮೀಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.</p>.<p class="title">‘ಭಾರತದಲ್ಲಿ ಸಾಕ್ಷ್ಯ ಆಧಾರಿತ ನೀತಿ ನಿರೂಪಣೆಗೆ ಪ್ರತಿರೋಧವನ್ನು ಎದುರಿಸಲಾಗುತ್ತಿದೆ’ ಎಂದು ಜಮೀಲ್ ಅವರು ತಮ್ಮ ಲೇಖನದಲ್ಲಿ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>