ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶಿ–ತಮಿಳು ಸಮಾಗಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಮೋದಿ

Last Updated 17 ನವೆಂಬರ್ 2022, 8:13 IST
ಅಕ್ಷರ ಗಾತ್ರ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಕಾಶಿ–ತಮಿಳು ಸಮಾಗಮ ಕಾರ್ಯಕ್ರಮಕ್ಕೆ ಔಪಚಾರಿಕ ಚಾಲನೆ ನೀಡಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಒಂದು ತಿಂಗಳ ಕಾಲ ನಡೆಯುವ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಸ್ವಕ್ಷೇತ್ರದಲ್ಲಿ ಪ್ರಧಾನಿ 3 ಗಂಟೆಗಳ ಕಾಲ ಇರಲಿದ್ದಾರೆ ಎಂದು ಮಹಾನಗರ್‌ ಅಧ್ಯಕ್ಷ ವಿದ್ಯಾಸಾಗರ್‌ ರೈ ಹೇಳಿದ್ದಾರೆ.

ಬನಾರಸ್‌ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಮೈದಾನದಲ್ಲಿ ಪ್ರಧಾನಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದು ಕೇಂದ್ರ ಸರ್ಕಾರದ ‘ಆಜಾದಿ ಕ ಅಮೃತ್‌ ಮಹೋತ್ಸವ್‌’ ಕಾರ್ಯಕ್ರಮದ ಭಾಗವಾಗಿದೆ.

‘ಒಂದು ಭಾರತ, ಶ್ರೇಷ್ಠ ಭಾರತ’ ಎಂಬ ಉದ್ದೇಶದ ಕಾರ್ಯಕ್ರಮ ತಮಿಳು ಭಾಷೆ ಮತ್ತು ಸಂಸ್ಕೃತಿಯ ಅನಾವರಣವಾಗಿದೆ. ನ.17ರಿಂದ ಡಿ.16ರವರೆಗೆ ಕಾರ್ಯಕ್ರಮ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT