ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ, ‘ಮೊದಲು ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಹೆಚ್ಚಳ ಮಾಡಲಾಗಿತ್ತು. ಇನ್ನು ಮುಂದೆ ಮೊಸರು, ಹಿಟ್ಟು ಹಾಗೂ ಧಾನ್ಯಗಳ ಬೆಲೆಯೂ ಗಗನಮುಖಿಯಾಗಲಿದೆ. ಮೋದಿ ಜೀ ತಮ್ಮ ಕೋಟ್ಯಾಧಿಪತಿ ಗೆಳೆಯರ ಬೊಕ್ಕಸ ತುಂಬಿಸಲು ಮಧ್ಯಮ ವರ್ಗದವರ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆ. ವಿದ್ಯುತ್ ದರ ಹೆಚ್ಚಳವೂ ಸನ್ನಿಹಿತವಾಗಿದೆ’ ಎಂದು ದೂರಿದ್ದಾರೆ.