<p class="title"><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯದಿನದ ಭಾಷಣ ಉತ್ತೇಜನಕಾರಿಯಾಗಿದ್ದು, ಸರ್ವಾಂಗೀಣ ಪ್ರಗತಿ, ಸ್ವಾವಲಂಬಿ ಹಾಗೂ ಸದೃಢ ಭಾರತದ ನಿರ್ಮಾಣವನ್ನು ಧ್ವನಿಸಲಿದೆ ಎಂದು ಬಿಜೆಪಿ ಮುಖಂಡರು ಶನಿವಾರ ಅಭಿಪ್ರಾಯಪಟ್ಟಿದ್ದಾರೆ.</p>.<p class="title">ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಅವರು ಆತ್ಮನಿರ್ಭರ ಭಾರತ ನಿರ್ಮಾಣವನ್ನು ಪ್ರತಿಪಾದಿಸಿದ್ದರು. ಪ್ರಧಾನಿ ಅವರದೂರದೃಷ್ಟಿ, ಧ್ಯೇಯ, ಸ್ವಾಭಿಮಾನಿ ಭಾರತ ನಿರ್ಮಿಸುವ ಧ್ಯೇಯವನ್ನು ಬಿಂಬಿಸಿತು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಕುರಿತು ಮಾಡಿದ ಸರಣಿ ಟ್ವೀಟ್ ಗಳಲ್ಲಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಇಂಥದೇ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಗೃಹ ಸಚಿವ ಅಮಿತ್ ಶಾ, ಭಾಷಣವನ್ನುಆದರ್ಶಪ್ರಾಯವಾದುದು ಎಂದು ಬಣ್ಣಿಸಿದ್ದಾರೆ. ಇದು ಸ್ಪಷ್ಟವಾಗಿ ಸುದೃಢ ಮತ್ತು ಸ್ವಾವಲಂಬಿ ಭಾರತ ನಿರ್ಮಿಸುವ ಬದ್ಧತೆಯನ್ನು ಬಿಂಬಿಸುತ್ತದೆ ಎಂದಿದ್ದಾರೆ.</p>.<p>ಈ ಕುರಿತ ಟ್ವೀಟ್ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಜಾಗತಿಕ ಆರ್ಥಿಕತೆಗೆ ಹೊಸ ದಿಕ್ಕು ನೀಡುವ ಕೌಶಲ ಮತ್ತು ಸಾಮರ್ಥ್ಯ ಭಾರತಕ್ಕಿದೆ ಎಂಬುದನ್ನು ಈ ಮೂಲಕ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯದಿನದ ಭಾಷಣ ಉತ್ತೇಜನಕಾರಿಯಾಗಿದ್ದು, ಸರ್ವಾಂಗೀಣ ಪ್ರಗತಿ, ಸ್ವಾವಲಂಬಿ ಹಾಗೂ ಸದೃಢ ಭಾರತದ ನಿರ್ಮಾಣವನ್ನು ಧ್ವನಿಸಲಿದೆ ಎಂದು ಬಿಜೆಪಿ ಮುಖಂಡರು ಶನಿವಾರ ಅಭಿಪ್ರಾಯಪಟ್ಟಿದ್ದಾರೆ.</p>.<p class="title">ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಅವರು ಆತ್ಮನಿರ್ಭರ ಭಾರತ ನಿರ್ಮಾಣವನ್ನು ಪ್ರತಿಪಾದಿಸಿದ್ದರು. ಪ್ರಧಾನಿ ಅವರದೂರದೃಷ್ಟಿ, ಧ್ಯೇಯ, ಸ್ವಾಭಿಮಾನಿ ಭಾರತ ನಿರ್ಮಿಸುವ ಧ್ಯೇಯವನ್ನು ಬಿಂಬಿಸಿತು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಕುರಿತು ಮಾಡಿದ ಸರಣಿ ಟ್ವೀಟ್ ಗಳಲ್ಲಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಇಂಥದೇ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಗೃಹ ಸಚಿವ ಅಮಿತ್ ಶಾ, ಭಾಷಣವನ್ನುಆದರ್ಶಪ್ರಾಯವಾದುದು ಎಂದು ಬಣ್ಣಿಸಿದ್ದಾರೆ. ಇದು ಸ್ಪಷ್ಟವಾಗಿ ಸುದೃಢ ಮತ್ತು ಸ್ವಾವಲಂಬಿ ಭಾರತ ನಿರ್ಮಿಸುವ ಬದ್ಧತೆಯನ್ನು ಬಿಂಬಿಸುತ್ತದೆ ಎಂದಿದ್ದಾರೆ.</p>.<p>ಈ ಕುರಿತ ಟ್ವೀಟ್ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಜಾಗತಿಕ ಆರ್ಥಿಕತೆಗೆ ಹೊಸ ದಿಕ್ಕು ನೀಡುವ ಕೌಶಲ ಮತ್ತು ಸಾಮರ್ಥ್ಯ ಭಾರತಕ್ಕಿದೆ ಎಂಬುದನ್ನು ಈ ಮೂಲಕ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>