<p>ಮುಂಬೈ (ಪಿಟಿಐ): ಸಂಸದ ಮೋಹನ್ ಡೇಲ್ಕರ್ (58) ಅವರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಅವರ ಶವಸೋಮವಾರ ದಕ್ಷಿಣ ಮುಂಬೈನ ಮರಿನಾ ಡ್ರೈವ್ ಹೋಟೆಲ್ನಲ್ಲಿ ಪತ್ತೆಯಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ.</p>.<p class="bodytext">ಪಕ್ಷೇತರ ಸದಸ್ಯರಾಗಿದ್ದ ಡೇಲ್ಕರ್ (58) ಲೋಕಸಭೆಯಲ್ಲಿ ದಾದ್ರಾ ಮತ್ತು ನಗರ ಹವೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 2019ರ ಚುನಾವಣೆಯಲ್ಲಿ ಏಳನೇ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು.</p>.<p class="bodytext">ಇವರಿಗೆ ಪತ್ನಿ, ಒಬ್ಬ ಮಗ, ಒಬ್ಬ ಮಗಳು ಇದ್ದಾರೆ. ‘ಸಾವಿಗೆ ಮುನ್ನ ಗುಜರಾತಿಯಲ್ಲಿ ಬರೆದಿರುವ ಪತ್ರ ದೊರೆತಿದೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಬಹುದು’ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.</p>.<p class="bodytext">ಪ್ರಾಥಮಿಕ ವರದಿ ಆಧರಿಸಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದು, ತನಿಖೆ ನಡೆದಿದೆ. ಇವರು, ಸಂಸತ್ತಿನ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಸ್ಥಾಯಿ ಸಮಿತಿಯ ಸದಸ್ಯರೂ ಆಗಿದ್ದರು.</p>.<p>ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಅವರು ವಕೀಲರಾಗಿದ್ದು, ಕಾರ್ಮಿಕ ನಾಯಕರಾಗಿ ತಮ್ಮ ಸಾರ್ವಜನಿಕ ಬದುಕು ಆರಂಭಿಸಿದ್ದು, ದಾದ್ರಾ, ನಗರ ಹವೇಲಿ ಕ್ಷೇತ್ರದಿಂದ ಮೊದಲ ಬಾರಿಗೆ 9ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 2009 ಮತ್ತು 2014ರಲ್ಲಿ ಪರಾಜಿತರಾಗಿದ್ದರು. ಆದರೆ, 17ನೇ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.</p>.<p>1989, 1991 ಮತ್ತು 1996ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಘಿ, 1998ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ಸಂಸದ ಮೋಹನ್ ಡೇಲ್ಕರ್ (58) ಅವರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಅವರ ಶವಸೋಮವಾರ ದಕ್ಷಿಣ ಮುಂಬೈನ ಮರಿನಾ ಡ್ರೈವ್ ಹೋಟೆಲ್ನಲ್ಲಿ ಪತ್ತೆಯಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ.</p>.<p class="bodytext">ಪಕ್ಷೇತರ ಸದಸ್ಯರಾಗಿದ್ದ ಡೇಲ್ಕರ್ (58) ಲೋಕಸಭೆಯಲ್ಲಿ ದಾದ್ರಾ ಮತ್ತು ನಗರ ಹವೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 2019ರ ಚುನಾವಣೆಯಲ್ಲಿ ಏಳನೇ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು.</p>.<p class="bodytext">ಇವರಿಗೆ ಪತ್ನಿ, ಒಬ್ಬ ಮಗ, ಒಬ್ಬ ಮಗಳು ಇದ್ದಾರೆ. ‘ಸಾವಿಗೆ ಮುನ್ನ ಗುಜರಾತಿಯಲ್ಲಿ ಬರೆದಿರುವ ಪತ್ರ ದೊರೆತಿದೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಬಹುದು’ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.</p>.<p class="bodytext">ಪ್ರಾಥಮಿಕ ವರದಿ ಆಧರಿಸಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದು, ತನಿಖೆ ನಡೆದಿದೆ. ಇವರು, ಸಂಸತ್ತಿನ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಸ್ಥಾಯಿ ಸಮಿತಿಯ ಸದಸ್ಯರೂ ಆಗಿದ್ದರು.</p>.<p>ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಅವರು ವಕೀಲರಾಗಿದ್ದು, ಕಾರ್ಮಿಕ ನಾಯಕರಾಗಿ ತಮ್ಮ ಸಾರ್ವಜನಿಕ ಬದುಕು ಆರಂಭಿಸಿದ್ದು, ದಾದ್ರಾ, ನಗರ ಹವೇಲಿ ಕ್ಷೇತ್ರದಿಂದ ಮೊದಲ ಬಾರಿಗೆ 9ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 2009 ಮತ್ತು 2014ರಲ್ಲಿ ಪರಾಜಿತರಾಗಿದ್ದರು. ಆದರೆ, 17ನೇ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.</p>.<p>1989, 1991 ಮತ್ತು 1996ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಘಿ, 1998ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>