ವಿಶೇಷ ನ್ಯಾಯಾಲಯದ ಆದೇಶ
ಅಕ್ರಮ ಹಣ ವರ್ಗಾವಣೆ: ದೇಶ್ಮುಖ್ ಆಪ್ತರ ಕಸ್ಟಡಿ ಅವಧಿ ಜು.6ವರೆಗೆ ವಿಸ್ತರಣೆ

ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಇಬ್ಬರು ಆಪ್ತರ ಇ.ಡಿ ಕಸ್ಟಡಿ ಅವಧಿಯನ್ನು ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್ಎ) ವಿಶೇಷ ನ್ಯಾಯಾಲಯ ಜು.6ರವರೆಗೆ ವಿಸ್ತರಿಸಿದೆ.
ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಅವರನ್ನು ಜೂನ್ 26 ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದರು. ಕಸ್ಟಡಿ ಅವಧಿ ಗುರುವಾರ ಮುಕ್ತಾಯಗೊಂಡ ಕಾರಣ ಅವರನ್ನು ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಇದನ್ನೂ ಓದಿ... ಪಂಜಾಬ್ ಗದ್ದುಗೆಯತ್ತ ಕೇಜ್ರಿವಾಲ್ ದೃಷ್ಟಿ; ಕಾಂಗ್ರೆಸ್ನಲ್ಲಿ ಒಳಜಗಳ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.