ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಮತ್ತೆ 14 ದಿನ ವಿಸ್ತರಿಸಿ ಸೋಮವಾರ ಆದೇಶ ನೀಡಿದೆ.
ಪತ್ರಾ ಚಾಳ್ ಭೂಹಗರಣದ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾವುತ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಆಗಸ್ಟ್ 1ರಂದು ವಶಕ್ಕೆ ಪಡೆದು ಬಳಿಕ ಬಂಧಿಸಿದ್ದರು.
ಸೋಮವಾರ ರಾವುತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ರಾವುತ್ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶಿಸಿತು.