<p><strong>ಮುಂಬೈ</strong>: ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಶಿವಸೇನಾ ನಾಯಕ ಸಂಜಯ್ ರಾವುತ್ ಅವರ ಜಾರಿ ನಿರ್ದೇಶನಾಲಯ (ಇ.ಡಿ) ಕಸ್ಟಡಿಯನ್ನು ಆಗಸ್ಟ್ 8ರ ವರೆಗೆ ವಿಸ್ತರಿಸಲಾಗಿದೆ.</p>.<p>ಸಂಜಯ ರಾವುತ್ ಅವರನ್ನು ಇ.ಡಿ ಅಧಿಕಾರಿಗಳು ಭಾನುವಾರ ತಮ್ಮ ಕಚೇರಿಗೆ ಕರೆದೊಯ್ದಿದ್ದರು. ಅದಕ್ಕೂ ಮುನ್ನ ಅವರ ಮನೆಯಲ್ಲಿ ಶೋಧ ನಡೆಸಿದ್ದ ಅಧಿಕಾರಿಗಳು ದಾಖಲೆ ಇಲ್ಲದ ₹11.5 ಲಕ್ಷ ನಗದು ದೊರೆತಿದೆ ಎಂದು ಹೇಳಿದ್ದರು.</p>.<p>ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ.</p>.<p>ಮುಂಬೈನ ಹೌಸಿಂಗ್ ಡೆವಲಪ್ಮೆಂಟ್ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದಿಂದ ಸಂಜಯ ರಾವುತ್ ಹಾಗೂ ಅವರ ಕುಟುಂಬಕ್ಕೆ ₹1.06 ಕೋಟಿ ಸಿಕ್ಕಿದೆ ಎಂದು ಇ.ಡಿ ಆರೋಪಿಸಿದೆ.</p>.<p>ಈ ಕಂಪನಿಯ ನಿರ್ದೇಶಕ ಪ್ರವೀಣ್ ರಾವುತ್ ಅವರನ್ನು ಇ.ಡಿ. ಈಗಾಗಲೇ ಬಂಧಿಸಿದೆ. ಆದರೆ, ತಮ್ಮ ವಿರುದ್ಧ ಇ.ಡಿ ಮಾಡಿರುವ ಆರೋಪಗಳನ್ನು ಅಲ್ಲಗಳೆದಿರುವ ಸಂಜಯ ರಾವುತ್, ಇದರಲ್ಲಿ ರಾಜಕೀಯ ಷಡ್ಯಂತ್ರವಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಶಿವಸೇನಾ ನಾಯಕ ಸಂಜಯ್ ರಾವುತ್ ಅವರ ಜಾರಿ ನಿರ್ದೇಶನಾಲಯ (ಇ.ಡಿ) ಕಸ್ಟಡಿಯನ್ನು ಆಗಸ್ಟ್ 8ರ ವರೆಗೆ ವಿಸ್ತರಿಸಲಾಗಿದೆ.</p>.<p>ಸಂಜಯ ರಾವುತ್ ಅವರನ್ನು ಇ.ಡಿ ಅಧಿಕಾರಿಗಳು ಭಾನುವಾರ ತಮ್ಮ ಕಚೇರಿಗೆ ಕರೆದೊಯ್ದಿದ್ದರು. ಅದಕ್ಕೂ ಮುನ್ನ ಅವರ ಮನೆಯಲ್ಲಿ ಶೋಧ ನಡೆಸಿದ್ದ ಅಧಿಕಾರಿಗಳು ದಾಖಲೆ ಇಲ್ಲದ ₹11.5 ಲಕ್ಷ ನಗದು ದೊರೆತಿದೆ ಎಂದು ಹೇಳಿದ್ದರು.</p>.<p>ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ.</p>.<p>ಮುಂಬೈನ ಹೌಸಿಂಗ್ ಡೆವಲಪ್ಮೆಂಟ್ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದಿಂದ ಸಂಜಯ ರಾವುತ್ ಹಾಗೂ ಅವರ ಕುಟುಂಬಕ್ಕೆ ₹1.06 ಕೋಟಿ ಸಿಕ್ಕಿದೆ ಎಂದು ಇ.ಡಿ ಆರೋಪಿಸಿದೆ.</p>.<p>ಈ ಕಂಪನಿಯ ನಿರ್ದೇಶಕ ಪ್ರವೀಣ್ ರಾವುತ್ ಅವರನ್ನು ಇ.ಡಿ. ಈಗಾಗಲೇ ಬಂಧಿಸಿದೆ. ಆದರೆ, ತಮ್ಮ ವಿರುದ್ಧ ಇ.ಡಿ ಮಾಡಿರುವ ಆರೋಪಗಳನ್ನು ಅಲ್ಲಗಳೆದಿರುವ ಸಂಜಯ ರಾವುತ್, ಇದರಲ್ಲಿ ರಾಜಕೀಯ ಷಡ್ಯಂತ್ರವಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>