‘ಇ.ಡಿಯು ಈ ಕಾಯ್ದೆಯನ್ನೇ ದುರ್ಬಲಗೊಳಿಸುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ ಪೀಠ, ಈ ಪ್ರಕರಣವಷ್ಟೇ ಅಲ್ಲದೆ, ₹1,000, ₹100ರ ಹಣ ವರ್ಗಾವಣೆ ಪ್ರಕರಣಗಳ ವಿರುದ್ಧವೂ ಈ ಕಾಯ್ದೆ ಬಳಸಲಾಗುತ್ತಿದೆ. ಈ ಕಾಯ್ದೆಯನ್ನು ಅಸ್ತ್ರವಾಗಿ ಬಳಸಿ, ಎಲ್ಲರನ್ನು ಕಂಬಿಯ ಹಿಂದೆ ಕಳುಹಿಸಲು ಆಗುವುದಿಲ್ಲ’ ಎಂದು ಪೀಠ ಹೇಳಿತು.