ನವದೆಹಲಿ: ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮೂರು ದಿನ ಮುನ್ನವೇ ಕೇರಳಕ್ಕೆ ಪ್ರವೇಶಿಸಿದ್ದು,ಮಾರುತಗಳು ಕೇರಳ ಕರಾವಳಿಗೆ ಅಪ್ಪಳಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ.
‘ನೈರುತ್ಯ ಮುಂಗಾರು ಮಾರುತಗಳು ಸಾಮಾನ್ಯ ಲೆಕ್ಕಾಚಾರದ ಪ್ರಕಾರ ಜೂನ್ 1ರಂದು ಭಾರತಕ್ಕೆ ಆಗಮಿಸಬೇಕಿತ್ತು. ಆದರೆ, ಈ ಬಾರಿ 3 ದಿನ ಮುನ್ನವೇ ಅಂದರೆ ಮೇ 29ರಂದೇ ಕೇರಳ ಕರಾವಳಿ ಪ್ರವೇಶಿಸಿವೆ’ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಖಚಿತಪಡಿಸಿದ್ದಾರೆ.
ನೈರುತ್ಯ ಮುಂಗಾರು ಇದೇ 27ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು. ಕೇರಳದಲ್ಲಿ ಸಾಮಾನ್ಯವಾಗಿ ಜೂನ್ 1ಕ್ಕೆ ಮುಂಗಾರು ಆರಂಭವಾಗುವುದು ವಾಡಿಕೆ.
ಮುಂದಿನ ಎರಡು ದಿನಗಳಲ್ಲಿ ಕೇರಳ, ಲಕ್ಷದೀಪದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
— India Meteorological Department (@Indiametdept) May 29, 2022
Conditions are favourable for further advance of southwest monsoon into some parts of central Arabian Sea, reaming parts of Kerala, some more parts of Tamil Nadu, some parts of Karnataka, and some more parts of south and Central Bay of Bengal, some parts of
— India Meteorological Department (@Indiametdept) May 29, 2022