ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು: ಕೇರಳಕ್ಕೆ ಜೂನ್ 3ರ ವೇಳೆಗೆ ಪ್ರವೇಶಿಸುವ ನಿರೀಕ್ಷೆ

Last Updated 30 ಮೇ 2021, 11:29 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇರಳದಲ್ಲಿಈ ಬಾರಿ ಮುಂಗಾರು ಮಾರುತಗಳ ಪ್ರವೇಶ ಎರಡು ದಿನ ವಿಳಂಬವಾಗುವ ನಿರೀಕ್ಷೆಯಿದೆ. ಜೂನ್ 3ರ ವೇಳೆಗೆ ಮುಂಗಾರು ಕೇರಳವನ್ನು ಪ್ರವೇಶಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ತಿಳಿಸಿದೆ.

ಐಎಂಡಿಯ ಪ್ರಧಾನ ನಿರ್ದೇಶಕ ಎಂ.ಮೊಹಾಪಾತ್ರ ಅವರು, ಕರ್ನಾಟಕದ ಕರಾವಳಿ ಭಾಗದಲ್ಲಿ ಸದ್ಯ ಜೋರು ಗಾಳಿಯ ಚಲನೆ ಇದೆ. ಇದರಿಂದಾಗಿ ನೈರುತ್ಯ ಮಾರುತಗಳ ಪ್ರವೇಶ ವಿಳಂಬವಾಗುತ್ತಿದೆ ಎಂದು ವಿವರಿಸಿದ್ದಾರೆ.

ಜೂನ್ 1ರಿಂದ ನೈರುತ್ಯ ಮಾರುತಗಳ ವೇಗ ತೀವ್ರಗೊಳ್ಳಬಹುದು. ಪರಿಣಾಮ ಕೇರಳದಲ್ಲಿ ಮಳೆಯಾಗಬಹುದು. ಈ ಕಾರಣದಿಂದ ಜೂನ್‌ 3ರ ವೇಳೆಗೆ ಮುಂಗಾರು ಕೇರಳವನ್ನು ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿದೆ ಎಂದರು.

ನೈರುತ್ಯ ಮಾರುತಗಳು ತೀವ್ರಗೊಳ್ಳುತ್ತಿರುವ ಪರಿಣಾಮ ದೇಶದ ಈಶಾನ್ಯ ಭಾಗದ ರಾಜ್ಯಗಳಲ್ಲಿ ಮುಂದಿನ ಐದು ದಿನ ಮಳೆ ಆಗುವ ಸಂಭವವಿದೆ. ಒಟ್ಟಾರೆ ಜೂನ್‌ 1 ರಿಂದ ನಾಲ್ಕು ತಿಂಗಳ ಮಳೆಗಾಲದ ಋತುವು ಆರಂಭವಾಗಲಿದೆ ಎಂದರು.

ಈ ಮೊದಲು ಮುಂಗಾರು ಮಾರುತವು ಕೇರಳವನ್ನು ಮೇ 31ರ ವೇಳೆಗೆ ಪ್ರವೇಶಿಸಬಹುದು ಎಂದು ಅಂದಾಜು ಮಾಡಲಾಗಿತ್ತು. ಈ ಹಂಗಾಮಿನಲ್ಲಿ ಮುಂಗಾರು ಮಳೆ ವಾಡಿಕೆಯಷ್ಟಿರುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT