ಮಧ್ಯಾಹ್ನ 12.30ಕ್ಕೆ ಕಲಾಪ ಪುನರಾರಂಭವಾದಾಗ, ಸಭಾಧ್ಯಕ್ಷ ಸ್ಥಾನದಲ್ಲಿದ್ದ ರಾಜೇಂದ್ರ ಅಗರ್ವಾಲ್ ಅವರು ನಿಯಮ 377ರ ಅಡಿಯಲ್ಲಿ ವಿಷಯಗಳನ್ನು ಕೈಗೆತ್ತಿಕೊಂಡರು. ನಂತರ, ಪ್ರತಿಭಟನಾ ನಿರತ ಸದಸ್ಯರಿಗೆ ತಮ್ಮ ಸ್ಥಾನಗಳಿಗೆ ಹೋಗಿ ಕುಳಿತುಕೊಳ್ಳುವಂತೆ ತಿಳಿಸಿದರು. ಆದರೂ ವಿರೋಧ ಪಕ್ಷಗಳ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿ, ಗದ್ದಲ ಎಬ್ಬಿಸಿದ ಕಾರಣ, ಕಲಾಪವನ್ನು ಮಧ್ಯಾಹ್ನ 2 ರವರೆಗೆ ಮುಂದೂಡಲಾಯಿತು.