ನವದೆಹಲಿ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ನಿಯಂತ್ರಣದ ಬಗ್ಗೆ ಕೆಲವು ರಾಜ್ಯಸಭಾ ಸದಸ್ಯರು ಟೀಕಿಸಿದ್ದರು. ಇದಕ್ಕೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಶಿವಸೇನಾ ನಾಯಕ ಸಂಜಯ್ ರಾವುತ್, ನನ್ನ ಅಮ್ಮ ಮತ್ತು ಸಹೋದರನಿಗೆ ಕೋವಿಡ್ ಸೋಂಕು ತಗುಲಿದೆ.
ಮಹಾರಾಷ್ಟ್ರದಲ್ಲಿ ಹಲವಾರು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಧಾರಾವಿಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.ಬಿಎಂಸಿಯ ಕಾರ್ಯವನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.ಕೆಲವು ಸದಸ್ಯರು ನಿನ್ನೆ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದು, ಅವರಿಗೆ ಈ ವಿಷಯವನ್ನು ತಿಳಿಸಲು ಬಯಸುತ್ತೇನೆ ಎಂದಿದ್ದಾರೆ.