<p><strong>ನವದೆಹಲಿ:</strong> ಸಾಲದ ಕಂತು ಮುಂದೂಡುವ ಅವಕಾಶವನ್ನು ಆರು ತಿಂಗಳಿಗೂ ಹೆಚ್ಚು ಕಾಲ ವಿಸ್ತರಿಸುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಸಾಲದ ಕಂತು ಪಾವತಿ ಅವಧಿಯನ್ನು ವಿಸ್ತರಿಸಿದರೆ ಸಾಲ ಪಾವತಿಸುವ ಶಿಸ್ತು ಹದಗೆಡಲಿದೆ. ಸಾಲದ ಪ್ರಮಾಣ ಹೆಚ್ಚಾಗಿ ಆರ್ಥಿಕತೆಯ ಮೇಲೆಯೂ ಪರಿಣಾಮ ಬೀರಲಿದೆ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಅದು ತಿಳಿಸಿದೆ.</p>.<p>ಕೋವಿಡ್–19 ಹಿನ್ನಲೆಯಲ್ಲಿ ವಿವಿಧ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದರಿಂದ ಸಾಲ ಮರುಪಾವತಿಸುವ ಕುರಿತು ಕೆ.ವಿ. ಕಾಮತ್ ಸಮಿತಿ ಶಿಫಾರಸ್ಸುಗಳ ಬಗ್ಗೆ ವಿವರ ಸಲ್ಲಿಸುವಂತೆ ಅಕ್ಟೋಬರ್ 5ರಂದು ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಆರ್ಬಿಐಗೆ ಸೂಚಿಸಿತ್ತು. ಹೀಗಾಗಿ, ಆರ್ಬಿಐ ಈ ಪ್ರಮಾಣ ಪತ್ರ ಸಲ್ಲಿಸಿದೆ.</p>.<p>ಬಡ್ಡಿ ಮೇಲಿನ ಬಡ್ಡಿ ಮನ್ನಾ ಮಾಡುವುದು ಆರ್ಥಿಕವಾಗಿ ದುಬಾರಿಯಾಗಲಿದೆ. ಇದರಿಂದ, ಬ್ಯಾಂಕ್ಗಳ ಆರ್ಥಿಕ ಸ್ಥಿರತೆ ಮೇಲೆಯೂ ಪರಿಣಾಮ ಬೀರಲಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>ತಾತ್ಕಾಲಿಕವಾಗಿ ಸಾಲದ ಕಂತು ಮುಂದೂಡುವುದು ಸಹ ಸಾಲಗಾರರ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದು ಆರ್ಬಿಐ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಾಲದ ಕಂತು ಮುಂದೂಡುವ ಅವಕಾಶವನ್ನು ಆರು ತಿಂಗಳಿಗೂ ಹೆಚ್ಚು ಕಾಲ ವಿಸ್ತರಿಸುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಸಾಲದ ಕಂತು ಪಾವತಿ ಅವಧಿಯನ್ನು ವಿಸ್ತರಿಸಿದರೆ ಸಾಲ ಪಾವತಿಸುವ ಶಿಸ್ತು ಹದಗೆಡಲಿದೆ. ಸಾಲದ ಪ್ರಮಾಣ ಹೆಚ್ಚಾಗಿ ಆರ್ಥಿಕತೆಯ ಮೇಲೆಯೂ ಪರಿಣಾಮ ಬೀರಲಿದೆ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಅದು ತಿಳಿಸಿದೆ.</p>.<p>ಕೋವಿಡ್–19 ಹಿನ್ನಲೆಯಲ್ಲಿ ವಿವಿಧ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದರಿಂದ ಸಾಲ ಮರುಪಾವತಿಸುವ ಕುರಿತು ಕೆ.ವಿ. ಕಾಮತ್ ಸಮಿತಿ ಶಿಫಾರಸ್ಸುಗಳ ಬಗ್ಗೆ ವಿವರ ಸಲ್ಲಿಸುವಂತೆ ಅಕ್ಟೋಬರ್ 5ರಂದು ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಆರ್ಬಿಐಗೆ ಸೂಚಿಸಿತ್ತು. ಹೀಗಾಗಿ, ಆರ್ಬಿಐ ಈ ಪ್ರಮಾಣ ಪತ್ರ ಸಲ್ಲಿಸಿದೆ.</p>.<p>ಬಡ್ಡಿ ಮೇಲಿನ ಬಡ್ಡಿ ಮನ್ನಾ ಮಾಡುವುದು ಆರ್ಥಿಕವಾಗಿ ದುಬಾರಿಯಾಗಲಿದೆ. ಇದರಿಂದ, ಬ್ಯಾಂಕ್ಗಳ ಆರ್ಥಿಕ ಸ್ಥಿರತೆ ಮೇಲೆಯೂ ಪರಿಣಾಮ ಬೀರಲಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>ತಾತ್ಕಾಲಿಕವಾಗಿ ಸಾಲದ ಕಂತು ಮುಂದೂಡುವುದು ಸಹ ಸಾಲಗಾರರ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದು ಆರ್ಬಿಐ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>