ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘರ್ಷಣೆಯಲ್ಲಿ ಭಾರತದ ಯೋಧರಿಗಿಂತಲೂ ಚೀನಾ ಸೈನಿಕರಿಗೇ ಹೆಚ್ಚಿನ ಹಾನಿ: ವರದಿ

Last Updated 12 ಡಿಸೆಂಬರ್ 2022, 16:22 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮತ್ತು ಚೀನಾ ಸೈನಿಕರ ನಡುವೆ ಅರುಣಾಚಲ ಪ್ರದೇಶದ ತವಾಂಗ್‌ ಸೆಕ್ಟರ್‌ನ ವಾಸ್ತವ ಗಡಿ ರೇಖೆ ಬಳಿ ಡಿಸೆಂಬರ್‌ 9ರಂದು ನಡೆದ ಘರ್ಷಣೆಯಲ್ಲಿ ಚೀನಾ ಕಡೆಯ ಹೆಚ್ಚಿನ ಸೈನಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಚೀನಾದ ಸುಮಾರು 300 ಸೈನಿಕರು ಶಸ್ತ್ರಸಜ್ಜಿತರಾಗಿ ಬಂದಿದ್ದರು. ಆದರೆ, ಸರ್ವಸನ್ನದ್ಧರಾಗಿದ್ದ ಭಾರತೀಯ ಸೈನಿಕರು ಸೂಕ್ತ ತಿರುಗೇಟು ನೀಡಿದ್ದಾರೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಗಡಿ ರೇಖೆ ಸಮೀಪ ಬಂದಿದ್ದ ಚೀನಾದ ಸೈನಿಕರಿಗೆ ಭಾರತೀಯ ಯೋಧರು ಪ್ರಬಲ ಪ್ರತಿರೋಧ ತೋರಿದರು. ಈ ಕಾದಾಟದಲ್ಲಿ ಭಾರತದ ಕಡೆಯ ಸೈನಿಕರಿಗಿಂತಲೂ ಚೀನಾದ ಕಡೆಯ ಹೆಚ್ಚಿನ ಸೈನಿಕರಿಗೆ ಗಾಯಗಳಾದವು ಎನ್ನಲಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ತವಾಂಗ್‌ನ ಭಾರತದ ಸೇನಾ ಕಮಾಂಡರ್ ಚೀನಾದ ಸೇನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಶಾಂತಿ ಕಾಪಾಡುವ ಪ್ರಯತ್ನ ನಡೆಸಿದ್ದಾರೆ.

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ವಾಸ್ತವ ಗಡಿ ರೇಖೆಯುದ್ಧಕ್ಕೂ ಕೆಲವು ವಿವಾದಿತ ಪ್ರದೇಶಗಳಿವೆ. ಎರಡೂ ಕಡೆಯವರು ತಮ್ಮ ನಿಯಂತ್ರಣದಲ್ಲಿರುವ ಪ್ರದೇಶಗಳ ಅಂಚಿನ ವರೆಗೆ ಗಸ್ತು ತಿರುಗುತ್ತಾರೆ. 2006ರಿಂದ ಈ ಪ್ರವೃತ್ತಿ ನಡೆಯುತ್ತಲೇ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT