<p><strong>ಅಯೋಧ್ಯೆ:</strong> ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾದ ಎರಡು ವರ್ಷಗಳಲ್ಲಿ ಶೇಕಡ 40ಕ್ಕೂ ಹೆಚ್ಚು ಭಾಗ ಪೂರ್ಣಗೊಂಡಿದೆ ಎಂದು ಶ್ರೀ ರಾಮಜನ್ಮಭೂಮಿ ಟ್ರಸ್ಟ್ನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>2023ರ ಡಿಸೆಂಬರ್ನಿಂದ ಭಕ್ತರು ದೇವರಿಗೆ ಪೂಜೆ ಅರ್ಪಿಸಬಹುದು ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ತಿಳಿಸಿದ್ದಾರೆ. ಈ ಬಗ್ಗೆ ಪಿಟಿಐ ವರದಿ ಮಾಡಿದೆ.</p>.<p>ದೇವಾಲಯದ ಸುತ್ತಲಿನ ರಸ್ತೆಗಳ ಸುಧಾರಣೆ, ಕಟ್ಟಡಗಳ ತೆರವು ಕಾರ್ಯಾಚರಣೆಗಳು ಸಹ ಭರದಿಂದ ಸಾಗುತ್ತಿವೆ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ದೇಗುಲ ನಿರ್ಮಾಣ ಕಾಮಗಾರಿ ಶೇ.40ಕ್ಕೂ ಹೆಚ್ಚು ಪೂರ್ಣಗೊಂಡಿದೆ. ಶೇ.80ಕ್ಕೂ ಹೆಚ್ಚು ಸ್ತಂಭದ ಕೆಲಸ ಮುಗಿದಿದೆ. ಡಿಸೆಂಬರ್ 2023ರಿಂದ ದೇವಸ್ಥಾನದಲ್ಲಿ ದರ್ಶನ ಆರಂಭವಾಗುವ ಸಾಧ್ಯತೆ ಇದೆ’ ಎಂದು ರೈ ಹೇಳಿದ್ದಾರೆ.</p>.<p>ದೇಶದಲ್ಲಿ ಮುಂದಿನ ಲೋಕಸಭೆ ಚುನಾವಣೆಯು 2024ರಲ್ಲಿ ನಡೆಯಲಿದೆ.</p>.<p>ಕರಸೇವಕ ಪುರಂನಲ್ಲಿ ನೆಲೆಸಿರುವ ರೈ, ಅಯೋಧ್ಯೆಯಲ್ಲೇ ಠಿಕಾಣಿ ಹೂಡಿದ್ದಾರೆ. ದೇಗುಲದ ನಿರ್ಮಾಣ ಕಾಮಗಾರಿಯ ಉಸ್ತುವಾರಿಯನ್ನು ಅವರೇ ನೋಡಿಕೊಳ್ಳುತ್ತಿದ್ದು, ನಿರ್ಮಾಣಕ್ಕೆ ಸಂಬಂಧಿಸಿದ ಸಭೆಗಳನ್ನು ನಿತ್ಯ ನಡೆಸುತ್ತಾರೆ. ಪ್ರಗತಿ ಪರಿಶೀಲನೆ ಮಾಡುತ್ತಾರೆ.</p>.<p>ನಿರ್ಮಾಣಕ್ಕೆ ಬಳಸಲಾದ ಹಣದ ಮೂಲದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರೈ, ‘ದೇವರ ಕಾರ್ಯಕ್ಕೆ ಹಣಕ್ಕೇನು ಕೊರತೆ? ದೇವರ ಚರಣಗಳಲ್ಲಿ ಲಕ್ಷ್ಮಿ ಕುಳಿತಿದ್ದಾಳೆ’ ಎಂದು ಹೇಳಿದ್ದಾರೆ.</p>.<p>ದೇವಾಲಯದ ಗರ್ಭಗುಡಿಯೊಳಗೆ ರಾಜಸ್ಥಾನದ ಮಕ್ರಾನಾ ಬೆಟ್ಟಗಳಿಂದ ತರಲಾದ ಅಮೃತಶಿಲೆಯನ್ನು ಬಳಸಲಾಗುತ್ತಿದೆ ಎಂದು ರೈ ತಿಳಿಸಿದ್ದಾರೆ.</p>.<p>2019ರ ನವೆಂಬರ್ 9ರ ಸುಪ್ರೀಂ ಕೋರ್ಟ್ ತೀರ್ಪು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದಾರಿ ಮಾಡಿಕೊಟ್ಟಿತು.</p>.<p>2020ರ ಆಗಸ್ಟ್ 5ರಂದು ಮಂದಿರ ನಿರ್ಮಾಣಕ್ಕೆ ಮೋದಿ ಭೂಮಿಪೂಜೆ ಮಾಡಿದ್ದರು.</p>.<p>ಯೋಜನೆಯ ಪ್ರಕಾರ, ರಾಮಮಂದಿರದ ಸುತ್ತಮುತ್ತಲಿನ 70 ಎಕರೆ ಪ್ರದೇಶದಲ್ಲಿ ವಾಲ್ಮೀಕಿ, ಕೇವತ್, ಶಬರಿ, ಜಟಾಯು, ಸೀತಾ, ವಿಘ್ನೇಶ್ವರ (ಗಣೇಶ) ಮತ್ತು ಶೇಷಾವತಾರ (ಲಕ್ಷ್ಮಣ) ದೇವಾಲಯಗಳನ್ನು ಸಹ ನಿರ್ಮಿಸಲಾಗುತ್ತದೆ.</p>.<p>ದೇವಾಲಯದ ನಿರ್ಮಾಣದ ಜೊತೆಗೆ, ಪ್ರಸಿದ್ಧ ಹನುಮಾನಗರ್ಹಿ ಮಂದಿರಕ್ಕೆ ಹೋಗುವ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ಅಂಗಡಿಗಳು ಮತ್ತು ಮನೆಗಳನ್ನು ಕೆಡವಲಾಗುತ್ತಿದೆ. ಆರಂಭದ ಪ್ರತಿಭಟನೆಗಳ ನಂತರ ಕಾಮಗಾರಿ ಶಾಂತಿಯುತವಾಗಿ ನಡೆಯುತ್ತಿದೆ. ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಅಂಗಡಿ, ಮನೆಗಳನ್ನು ಸ್ಥಳೀಯರೇ ಸ್ವಯಂ ಪ್ರೇರಿತವಾಗಿ ನೆಲಸಮಗೊಳಿಸುತ್ತಿದ್ದಾರೆ.</p>.<p><strong>ಇದನ್ನೂ ಓದಿ</strong></p>.<p><a href="https://www.prajavani.net/india-news/illegal-land-transaction-ayodhya-development-authority-names-mayor-bjp-mla-among-40-people-961235.html" itemprop="url">ಅಯೋಧ್ಯೆಯಲ್ಲಿ ಅಕ್ರಮ ಭೂ ವ್ಯವಹಾರ: ಮೇಯರ್, ಬಿಜೆಪಿ ಶಾಸಕ ಭಾಗಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾದ ಎರಡು ವರ್ಷಗಳಲ್ಲಿ ಶೇಕಡ 40ಕ್ಕೂ ಹೆಚ್ಚು ಭಾಗ ಪೂರ್ಣಗೊಂಡಿದೆ ಎಂದು ಶ್ರೀ ರಾಮಜನ್ಮಭೂಮಿ ಟ್ರಸ್ಟ್ನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>2023ರ ಡಿಸೆಂಬರ್ನಿಂದ ಭಕ್ತರು ದೇವರಿಗೆ ಪೂಜೆ ಅರ್ಪಿಸಬಹುದು ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ತಿಳಿಸಿದ್ದಾರೆ. ಈ ಬಗ್ಗೆ ಪಿಟಿಐ ವರದಿ ಮಾಡಿದೆ.</p>.<p>ದೇವಾಲಯದ ಸುತ್ತಲಿನ ರಸ್ತೆಗಳ ಸುಧಾರಣೆ, ಕಟ್ಟಡಗಳ ತೆರವು ಕಾರ್ಯಾಚರಣೆಗಳು ಸಹ ಭರದಿಂದ ಸಾಗುತ್ತಿವೆ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ದೇಗುಲ ನಿರ್ಮಾಣ ಕಾಮಗಾರಿ ಶೇ.40ಕ್ಕೂ ಹೆಚ್ಚು ಪೂರ್ಣಗೊಂಡಿದೆ. ಶೇ.80ಕ್ಕೂ ಹೆಚ್ಚು ಸ್ತಂಭದ ಕೆಲಸ ಮುಗಿದಿದೆ. ಡಿಸೆಂಬರ್ 2023ರಿಂದ ದೇವಸ್ಥಾನದಲ್ಲಿ ದರ್ಶನ ಆರಂಭವಾಗುವ ಸಾಧ್ಯತೆ ಇದೆ’ ಎಂದು ರೈ ಹೇಳಿದ್ದಾರೆ.</p>.<p>ದೇಶದಲ್ಲಿ ಮುಂದಿನ ಲೋಕಸಭೆ ಚುನಾವಣೆಯು 2024ರಲ್ಲಿ ನಡೆಯಲಿದೆ.</p>.<p>ಕರಸೇವಕ ಪುರಂನಲ್ಲಿ ನೆಲೆಸಿರುವ ರೈ, ಅಯೋಧ್ಯೆಯಲ್ಲೇ ಠಿಕಾಣಿ ಹೂಡಿದ್ದಾರೆ. ದೇಗುಲದ ನಿರ್ಮಾಣ ಕಾಮಗಾರಿಯ ಉಸ್ತುವಾರಿಯನ್ನು ಅವರೇ ನೋಡಿಕೊಳ್ಳುತ್ತಿದ್ದು, ನಿರ್ಮಾಣಕ್ಕೆ ಸಂಬಂಧಿಸಿದ ಸಭೆಗಳನ್ನು ನಿತ್ಯ ನಡೆಸುತ್ತಾರೆ. ಪ್ರಗತಿ ಪರಿಶೀಲನೆ ಮಾಡುತ್ತಾರೆ.</p>.<p>ನಿರ್ಮಾಣಕ್ಕೆ ಬಳಸಲಾದ ಹಣದ ಮೂಲದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರೈ, ‘ದೇವರ ಕಾರ್ಯಕ್ಕೆ ಹಣಕ್ಕೇನು ಕೊರತೆ? ದೇವರ ಚರಣಗಳಲ್ಲಿ ಲಕ್ಷ್ಮಿ ಕುಳಿತಿದ್ದಾಳೆ’ ಎಂದು ಹೇಳಿದ್ದಾರೆ.</p>.<p>ದೇವಾಲಯದ ಗರ್ಭಗುಡಿಯೊಳಗೆ ರಾಜಸ್ಥಾನದ ಮಕ್ರಾನಾ ಬೆಟ್ಟಗಳಿಂದ ತರಲಾದ ಅಮೃತಶಿಲೆಯನ್ನು ಬಳಸಲಾಗುತ್ತಿದೆ ಎಂದು ರೈ ತಿಳಿಸಿದ್ದಾರೆ.</p>.<p>2019ರ ನವೆಂಬರ್ 9ರ ಸುಪ್ರೀಂ ಕೋರ್ಟ್ ತೀರ್ಪು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದಾರಿ ಮಾಡಿಕೊಟ್ಟಿತು.</p>.<p>2020ರ ಆಗಸ್ಟ್ 5ರಂದು ಮಂದಿರ ನಿರ್ಮಾಣಕ್ಕೆ ಮೋದಿ ಭೂಮಿಪೂಜೆ ಮಾಡಿದ್ದರು.</p>.<p>ಯೋಜನೆಯ ಪ್ರಕಾರ, ರಾಮಮಂದಿರದ ಸುತ್ತಮುತ್ತಲಿನ 70 ಎಕರೆ ಪ್ರದೇಶದಲ್ಲಿ ವಾಲ್ಮೀಕಿ, ಕೇವತ್, ಶಬರಿ, ಜಟಾಯು, ಸೀತಾ, ವಿಘ್ನೇಶ್ವರ (ಗಣೇಶ) ಮತ್ತು ಶೇಷಾವತಾರ (ಲಕ್ಷ್ಮಣ) ದೇವಾಲಯಗಳನ್ನು ಸಹ ನಿರ್ಮಿಸಲಾಗುತ್ತದೆ.</p>.<p>ದೇವಾಲಯದ ನಿರ್ಮಾಣದ ಜೊತೆಗೆ, ಪ್ರಸಿದ್ಧ ಹನುಮಾನಗರ್ಹಿ ಮಂದಿರಕ್ಕೆ ಹೋಗುವ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ಅಂಗಡಿಗಳು ಮತ್ತು ಮನೆಗಳನ್ನು ಕೆಡವಲಾಗುತ್ತಿದೆ. ಆರಂಭದ ಪ್ರತಿಭಟನೆಗಳ ನಂತರ ಕಾಮಗಾರಿ ಶಾಂತಿಯುತವಾಗಿ ನಡೆಯುತ್ತಿದೆ. ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಅಂಗಡಿ, ಮನೆಗಳನ್ನು ಸ್ಥಳೀಯರೇ ಸ್ವಯಂ ಪ್ರೇರಿತವಾಗಿ ನೆಲಸಮಗೊಳಿಸುತ್ತಿದ್ದಾರೆ.</p>.<p><strong>ಇದನ್ನೂ ಓದಿ</strong></p>.<p><a href="https://www.prajavani.net/india-news/illegal-land-transaction-ayodhya-development-authority-names-mayor-bjp-mla-among-40-people-961235.html" itemprop="url">ಅಯೋಧ್ಯೆಯಲ್ಲಿ ಅಕ್ರಮ ಭೂ ವ್ಯವಹಾರ: ಮೇಯರ್, ಬಿಜೆಪಿ ಶಾಸಕ ಭಾಗಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>