ಈ ಕುರಿತು ಮಾತನಾಡಿದ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ‘ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿ ಇರಿಸುವ ಆನೆಗಳ ಸಂರಕ್ಷಣೆ ಅತ್ಯಾವಶ್ಯಕ. ಮನುಷ್ಯರ ಜೊತೆಗಿನ ಸಂಘರ್ಷಕ್ಕೆ ಕಡಿವಾಣ ಹಾಕಲು ಆನೆಗಳನ್ನು ಕಾಡಿನಲ್ಲೇ ಇರುವಂತೆ ನೋಡಿಕೊಳ್ಳಬೇಕಾಗಿದೆ. ಇದಕ್ಕಾಗಿ ಅಗತ್ಯ ಮೇವು ಹಾಗೂ ನೀರಿನ ಸಂಗ್ರಹಕ್ಕೆ ಬೇಕಾದ ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದ್ದು, ಮುಂದಿನ ವರ್ಷದಿಂದಲೇ ಇದರ ಫಲಿತಾಂಶ ನಮ್ಮ ಮುಂದೆ ಇರಲಿದೆ’ ಎಂದರು.