ಐಜ್ವಾಲ್: ಕಳೆದ ಕೆಲವು ವಾರಗಳಲ್ಲಿ ಮ್ಯಾನ್ಮಾರ್ನ 700ಕ್ಕೂ ಹೆಚ್ಚು ನಿರಾಶ್ರಿತರಿಗೆ ರಾಜ್ಯದಲ್ಲಿ ಆಶ್ರಯ ನೀಡಲಾಗಿದೆ ಎಂದು ಮಿಜೋರಾಂ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಶ್ರಯ ಪಡೆದವರಲ್ಲಿ ಮ್ಯಾನ್ಮಾರ್ ನಾಗರಿಕರು, ಗರ್ಭಿಣಿಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿದ್ದಾರೆ ಎಂದು ಅವರು ಹೇಳಿದ್ದಾರೆ.
ಮ್ಯಾನ್ಮಾರ್ನಲ್ಲಿ ಫೆಬ್ರುವರಿಯಲ್ಲಿ ನಡೆದ ಸೇನಾ ದಂಗೆಯ ಬಳಿಕ ಅಲ್ಲಿನ ಒಟ್ಟು 10,025 ಪ್ರಜೆಗಳು ಮಿಜೋರಾಂಗೆ ನುಸುಳಿದ್ದಾರೆ. ರಾಜ್ಯದಲ್ಲಿ ಆಶ್ರಯ ಪಡೆದವರ ಪೈಕಿ ಕನಿಷ್ಠ 22 ಮಂದಿ ಮ್ಯಾನ್ಮಾರ್ ಸಂಸತ್ ಸದಸ್ಯರೂ ಇದ್ದಾರೆ ಎಂದು ಅವರು ಹೇಳಿದ್ದಾರೆ.