‘ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ 10ನೇ ವಾರ್ಡ್ಗೆ ವೈದ್ಯಕೀಯ ತಂಡವನ್ನು ಕಳುಹಿಸಿಕೊಟ್ಟಿದ್ದೇವೆ. ಅಲ್ಲಿ ಜನರು ಕಲುಷಿತ ಆಹಾರ ಸೇವಿಸಿರುವುದು ಗೊತ್ತಾಗಿದೆ. ಒಆರ್ಎಸ್ ಪೊಟ್ಟಣಗಳನ್ನು ವಿತರಿಸಲಾಗಿದ್ದು, ಇತರ ತುರ್ತು ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಅಸ್ವಸ್ಥರಾದವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪತೇಪುರ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ’ ಎಂದು ವೈಶಾಲಿ ಜಿಲ್ಲೆಯ ಸಿವಿಲ್ ಸರ್ಜನ್ ಡಾ. ಅಮಿತಾಭ್ ಕುಮಾರ್ ಸಿನ್ಹ ತಿಳಿಸಿದ್ದಾರೆ.