ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರೀಶ್‌ ರಾವತ್‌ರ ತಿರುಚಿದ ಚಿತ್ರ: ಬಿಜೆಪಿಗೆ ಚುನಾವಣಾ ಆಯೋಗ ಎಚ್ಚರಿಕೆ

Last Updated 11 ಫೆಬ್ರುವರಿ 2022, 13:13 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಮತ್ತು ಚುನಾವಣಾ ನೀತಿಗಳನ್ನು ಅನುಸರಿಸುವಂತೆ ಬಿಜೆಪಿಯ ಉತ್ತರಾಖಂಡ ಘಟಕಕ್ಕೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್‌ ಮುಖಂಡ, ಮಾಜಿ ಸಿಎಂ ಹರೀಶ್‌ ರಾವತ್‌ ಅವರ ತಿರುಚಿದ ಚಿತ್ರವನ್ನು ಟ್ವೀಟ್‌ ಮಾಡಿದ್ದಕ್ಕೆ ಸಂಬಂಧಿಸಿ ಚುನಾವಣಾ ಆಯೋಗವು ಬಿಜೆಪಿಯನ್ನು ಎಚ್ಚರಿಸಿದೆ. ಕಳೆದ ವಾರ ಇದೇ ವಿಚಾರಕ್ಕೆ ಸಂಬಂಧಿಸಿ ನೋಟಿಸ್‌ ನೀಡಲಾಗಿತ್ತು.

ಉತ್ತರಾಖಂಡ ಬಿಜೆಪಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಚಿತ್ರದಲ್ಲಿ ರಾವತ್‌ ಅವರನ್ನು ಮುಸ್ಲಿಂ ಧರ್ಮಗುರುವಿನಂತೆ ತಿರುಚಲಾಗಿತ್ತು.

ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರುವರಿ 14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್‌ 10ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT