ನವದೆಹಲಿ: ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಮತ್ತು ಚುನಾವಣಾ ನೀತಿಗಳನ್ನು ಅನುಸರಿಸುವಂತೆ ಬಿಜೆಪಿಯ ಉತ್ತರಾಖಂಡ ಘಟಕಕ್ಕೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಹರೀಶ್ ರಾವತ್ ಅವರ ತಿರುಚಿದ ಚಿತ್ರವನ್ನು ಟ್ವೀಟ್ ಮಾಡಿದ್ದಕ್ಕೆ ಸಂಬಂಧಿಸಿ ಚುನಾವಣಾ ಆಯೋಗವು ಬಿಜೆಪಿಯನ್ನು ಎಚ್ಚರಿಸಿದೆ. ಕಳೆದ ವಾರ ಇದೇ ವಿಚಾರಕ್ಕೆ ಸಂಬಂಧಿಸಿ ನೋಟಿಸ್ ನೀಡಲಾಗಿತ್ತು.
ಉತ್ತರಾಖಂಡ ಬಿಜೆಪಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದ ಚಿತ್ರದಲ್ಲಿ ರಾವತ್ ಅವರನ್ನು ಮುಸ್ಲಿಂ ಧರ್ಮಗುರುವಿನಂತೆ ತಿರುಚಲಾಗಿತ್ತು.
ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರುವರಿ 14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.