ತಮಿಳುನಾಡಿನ ಕೂನೂರಿನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಮಧುಲಿಕಾ, ಲಿದ್ದರ್ ಸೇರಿ 13 ಮಂದಿ ಮೃತಪಟ್ಟಿದ್ದರು. ಈವರೆಗೆ ನಾಲ್ವರ ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ಹಾಗೂ ಹತ್ತಿರದ ಸಂಬಂಧಿಕರಿಂದ ಪಡೆದ ರಕ್ತದ ಮಾದರಿ ಜೊತೆ ಹೋಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.