ಈ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಮುರಳೀಧರನ್, ‘ಹಿಂಸಾಚಾರದಲ್ಲಿ ಗಾಯಗೊಂಡಿದ್ದ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ನಾನು ಪಶ್ಚಿಮ ಮಿಡ್ನಾಪುರಕ್ಕೆ ತೆರಳಿದ್ದೆ. ಒಬ್ಬೊಬ್ಬರನ್ನೇ ಮಾತನಾಡಿಸುತ್ತಾ, ಮನೆಯಿಂದ ಮನೆಗೆ ತೆರಳುತ್ತಿದ್ದೆ. ಇದ್ದಕ್ಕಿದ್ದಂತೆ ಒಂದು ಗುಂಪು ನನ್ನ ಮೇಲೆ ದಾಳಿ ಮಾಡಿತು‘ ಎಂದು ಮುರಳೀಧರನ್ ಹೇಳಿದ್ದಾರೆ.