<p><strong>ವಡೋದರ: </strong>ಗುಜರಾತ್ನ ವಡೋದರದ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ 4 ವರ್ಷದ ಬಾಲಕಿ ಸೇರಿ ನಾಲ್ವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ಧಾರೆ.</p>.<p>65 ವರ್ಷದ ವ್ಯಕ್ತಿ, ಓರ್ವ ಯುವತಿ ಮತ್ತು 30 ವರ್ಷದ ಮಹಿಳೆ ಮೃತಪಟ್ಟ ಇತರೆ ಮೂವರು ಎಂದು ಅವರು ತಿಳಿಸಿದ್ದಾರೆ.</p>.<p>‘ಬೆಳಗ್ಗೆ 9.30ರ ಸುಮಾರಿಗೆ ಬಲವಾದ ಸ್ಫೋಟ ಸಂಭವಿಸಿದ್ದು, 15 ಮಂದಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ 4 ಜನರು ಮೃತಪಟ್ಟಿದ್ದಾರೆ. ಕೆಲವರು ಕರೆತರುವಾಗಲೇ ಮಾರ್ಗಮಧ್ಯೆ ಮೃತಪಟ್ಟರೆ, ಮತ್ತೆ ಕೆಲವರು ಚಿಕಿತ್ಸೆ ವೇಳೆ ಅಸುನೀಗಿದ್ದಾರೆ’ ಎಂದು ಮಕರ್ ಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಜಿದ್ ಬಲೋಚ್ ತಿಳಿಸಿದ್ದಾರೆ.</p>.<p>ಮೃತರಲ್ಲಿ ಕಾರ್ಮಿಕರು, ದಾರಿಹೋಕರು ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p>‘ನಾಲ್ವರಲ್ಲಿ ಕೆಲವರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರೆ, ಮತ್ತೆ ಕೆಲವರು ಹಾರಿಬಂದ ವಸ್ತುಗಳು ಬಡಿದು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಧಿ ವಿಜ್ಞಾನ ತಜ್ಞರ ತಂಡ ಪರಿಶೀಲನೆ ನಡೆಸುತ್ತಿದೆ’ ಎಂದು ಬಲೋಚ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡೋದರ: </strong>ಗುಜರಾತ್ನ ವಡೋದರದ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ 4 ವರ್ಷದ ಬಾಲಕಿ ಸೇರಿ ನಾಲ್ವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ಧಾರೆ.</p>.<p>65 ವರ್ಷದ ವ್ಯಕ್ತಿ, ಓರ್ವ ಯುವತಿ ಮತ್ತು 30 ವರ್ಷದ ಮಹಿಳೆ ಮೃತಪಟ್ಟ ಇತರೆ ಮೂವರು ಎಂದು ಅವರು ತಿಳಿಸಿದ್ದಾರೆ.</p>.<p>‘ಬೆಳಗ್ಗೆ 9.30ರ ಸುಮಾರಿಗೆ ಬಲವಾದ ಸ್ಫೋಟ ಸಂಭವಿಸಿದ್ದು, 15 ಮಂದಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ 4 ಜನರು ಮೃತಪಟ್ಟಿದ್ದಾರೆ. ಕೆಲವರು ಕರೆತರುವಾಗಲೇ ಮಾರ್ಗಮಧ್ಯೆ ಮೃತಪಟ್ಟರೆ, ಮತ್ತೆ ಕೆಲವರು ಚಿಕಿತ್ಸೆ ವೇಳೆ ಅಸುನೀಗಿದ್ದಾರೆ’ ಎಂದು ಮಕರ್ ಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಜಿದ್ ಬಲೋಚ್ ತಿಳಿಸಿದ್ದಾರೆ.</p>.<p>ಮೃತರಲ್ಲಿ ಕಾರ್ಮಿಕರು, ದಾರಿಹೋಕರು ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p>‘ನಾಲ್ವರಲ್ಲಿ ಕೆಲವರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರೆ, ಮತ್ತೆ ಕೆಲವರು ಹಾರಿಬಂದ ವಸ್ತುಗಳು ಬಡಿದು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಧಿ ವಿಜ್ಞಾನ ತಜ್ಞರ ತಂಡ ಪರಿಶೀಲನೆ ನಡೆಸುತ್ತಿದೆ’ ಎಂದು ಬಲೋಚ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>