<p><strong>ನಾಗ್ಪುರ</strong>: ಮೀಸಲಾತಿಯ ಶೇ 50ರಷ್ಟು ಮಿತಿಯನ್ನು ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿಯ ಮುಖಂಡ ದೇವೇಂದ್ರ ಫಡ್ನವೀಸ್ ಶುಕ್ರವಾರ ಹೇಳಿದ್ದಾರೆ.</p>.<p>ನಾಗ್ಪುರ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಮರಾಠಾ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಸುಮ್ಮನೆ ಹಾದುಹೋಗಿದೆ ಅಷ್ಟೇ ಎಂದು ಆರೋಪಿಸಿದರು.</p>.<p>‘ಕೇಂದ್ರ ಸರ್ಕಾರವು ಮೀಸಲಾತಿ ವಿಚಾರದಲ್ಲಿ ಈಗಾಗಲೇ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ. ಆದರೆ, ಮಹಾರಾಷ್ಟ್ರ ಸರ್ಕಾರವು ಇನ್ನೂ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿಲ್ಲ’ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.</p>.<p>‘ಉದ್ಯೋಗ ಮತ್ತು ಶಿಕ್ಷಣದಲ್ಲಿನ ಮೀಸಲಾತಿಗೆ ಇತರ ಹಿಂದುಳಿದ ವರ್ಗದವರನ್ನು (ಒಬಿಸಿ) ಗುರುತಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ’ ಎಂದು ಇದೇ ತಿಂಗಳ 5ರಂದು ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.</p>.<p>ಮರಾಠಾ ಸಮುದಾಯದವರಿಗೆ ನೀಡಿದ್ದ ಮಿಸಲಾತಿಯನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ರದ್ದುಪಡಿಸಿತ್ತು. ಅಲ್ಲದೆ ಹಿಂದುಳಿದ ವರ್ಗಗಳನ್ನು ಗುರುತಿಸುವ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಪೀಠ ಭಿನ್ನ ತೀರ್ಪು ನೀಡಿತ್ತು. ಮೂವರು ನ್ಯಾಯಮೂರ್ತಿಗಳು ರಾಜ್ಯಗಳಿಗೆ ಈ ಅಧಿಕಾರ ಇಲ್ಲ ಎಂದು ಹೇಳಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ರಾಜ್ಯಗಳಿಗೆ ಈ ಅಧಿಕಾರ ಇದೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ</strong>: ಮೀಸಲಾತಿಯ ಶೇ 50ರಷ್ಟು ಮಿತಿಯನ್ನು ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿಯ ಮುಖಂಡ ದೇವೇಂದ್ರ ಫಡ್ನವೀಸ್ ಶುಕ್ರವಾರ ಹೇಳಿದ್ದಾರೆ.</p>.<p>ನಾಗ್ಪುರ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಮರಾಠಾ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಸುಮ್ಮನೆ ಹಾದುಹೋಗಿದೆ ಅಷ್ಟೇ ಎಂದು ಆರೋಪಿಸಿದರು.</p>.<p>‘ಕೇಂದ್ರ ಸರ್ಕಾರವು ಮೀಸಲಾತಿ ವಿಚಾರದಲ್ಲಿ ಈಗಾಗಲೇ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ. ಆದರೆ, ಮಹಾರಾಷ್ಟ್ರ ಸರ್ಕಾರವು ಇನ್ನೂ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿಲ್ಲ’ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.</p>.<p>‘ಉದ್ಯೋಗ ಮತ್ತು ಶಿಕ್ಷಣದಲ್ಲಿನ ಮೀಸಲಾತಿಗೆ ಇತರ ಹಿಂದುಳಿದ ವರ್ಗದವರನ್ನು (ಒಬಿಸಿ) ಗುರುತಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ’ ಎಂದು ಇದೇ ತಿಂಗಳ 5ರಂದು ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.</p>.<p>ಮರಾಠಾ ಸಮುದಾಯದವರಿಗೆ ನೀಡಿದ್ದ ಮಿಸಲಾತಿಯನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ರದ್ದುಪಡಿಸಿತ್ತು. ಅಲ್ಲದೆ ಹಿಂದುಳಿದ ವರ್ಗಗಳನ್ನು ಗುರುತಿಸುವ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಪೀಠ ಭಿನ್ನ ತೀರ್ಪು ನೀಡಿತ್ತು. ಮೂವರು ನ್ಯಾಯಮೂರ್ತಿಗಳು ರಾಜ್ಯಗಳಿಗೆ ಈ ಅಧಿಕಾರ ಇಲ್ಲ ಎಂದು ಹೇಳಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ರಾಜ್ಯಗಳಿಗೆ ಈ ಅಧಿಕಾರ ಇದೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>