ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಶಹಡೋಲ್ ಜಿಲ್ಲೆಯ ಸಿನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಥೋಟಿಯಾ ನಿವಾಸಿಯಾಗಿರುವ ಮಗುವಿನ ತಾಯಿ ಹಾಗೂ ಆಕೆಯ ಕುಟುಂಬವು ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ನಕಲಿ ವೈದ್ಯರ ಬಳಿಗೆ ಕರೆದೊಯ್ದಿತ್ತು. ಆದರೆ, ಮಗುವಿನ ಆರೋಗ್ಯ ಸುಧಾರಿಸಿರಲಿಲ್ಲ. ಬಳಿಕ ಕುಟುಂಬವು ಮಂತ್ರವಾದಿಯೊಬ್ಬರನ್ನು ಸಂಪರ್ಕಿಸಿತ್ತು. ‘ಮಗುವಿಗೆ ಚಿಕಿತ್ಸೆ ರೂಪದಲ್ಲಿ 51 ಬಾರಿ ಕಾದ ಕಬ್ಬಿಣದ ಸರಳಿನಿಂದ ಚುಚ್ಚಿದರೆ ಗುಣವಾಗುತ್ತದೆ’ ಎನ್ನುವ ಮಂತ್ರವಾದಿಯ ಸಲಹೆಯ ಮೇರೆಗೆ ತಾಯಿ, ಮಗುವಿಗೆ ಬಿಸಿ ಕಬ್ಬಿಣದ ಸರಳಿನಿಂದ ಚುಚ್ಚಿದ್ದಳು. ಇದರಿಂದ ಮಗುವಿನ ಸ್ಥಿತಿ ಹದಗೆಟ್ಟಿತ್ತು. ಬಳಿಕ ಮಗುವನ್ನು ಶಹಡೋಲ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು ಎಂದು ಮೂಲಗಳು ಹೇಳಿವೆ.