ಆಗಿದ್ದೇನು?:ಉತ್ತರ ಪ್ರದೇಶದ ಝಾನ್ಸಿ ಮೂಲದವನಾದ ಆರೋಪಿ ಸಂಜಯ್ ದೀಕ್ಷಿತ್, ಕಳೆದೆರಡು ತಿಂಗಳ ಹಿಂದಿನಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇದೇ ಕಟ್ಟಡದಲ್ಲಿ ವಾಸವಿದ್ದ ಮಹಿಳೆಯೊಬ್ಬರನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಮದುವೆಗೆ ನಿರಾಕರಿಸಿದ್ದಕ್ಕೆ ಆರೋಪಿ ದೀಕ್ಷಿತ್, ಕಟ್ಟಡದ ವಾಹನಗಳ ಪಾರ್ಕಿಂಗ್ನಲ್ಲಿ ನಿಂತಿದ್ದ ಆಕೆಯ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದ. ಇದೇ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿ, 7 ಮಂದಿ ಅಮಾಯಕರ ಸಾವಿಗೆ ಕಾರಣವಾಗಿತ್ತು.