<p class="bodytext"><strong>ಜಬಲ್ಪುರ (ಮಧ್ಯ ಪ್ರದೇಶ): </strong>ಬಿಜೆಪಿ ಶಾಸಕ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಸಮಿತಿಯ ಅಧ್ಯಕ್ಷಗೌರಿ ಶಂಕರ್ ಬಿಸೆನ್ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆಮಧ್ಯ ಪ್ರದೇಶ ಹೈಕೋರ್ಟ್ಬುಧವಾರ ಮತ್ತೊಮ್ಮೆ ನಿರ್ದೇಶನ ನೀಡಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಬಿಸೇನ್ ವಿರುದ್ಧ ಇದೆ.</p>.<p class="bodytext">ಬಿಸೆನ್ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಲು ಕೋರಿ ಶಾಸಕ ಕಿಶೋರ್ ಸಮರೀತೆ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶ ರವಿ ಮಾಲಿಮತ್ ಮತ್ತು ನ್ಯಾಯಧೀಶ ವಿಶಾಲ್ ಮಿಶ್ರಾ ಅವರು ತಿರಸ್ಕರಿಸಿದರು.</p>.<p class="bodytext">226 ವಿಧಿ ಅನ್ವಯ ಪಿಐಎಲ್ಅನ್ನು ಸಲ್ಲಿಸಲಾಗಿದೆ. ಆದ್ದರಿಂದ, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಆರೋಪಗಳ ವಿಚಾರಣೆ ನಡೆಸಲು ನಮಗೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.</p>.<p class="bodytext">ಈ ಹಿಂದೆಯೂ ಹೈಕೋರ್ಟ್ ಇದೇ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಬಿಸೇನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮತ್ತೊಮ್ಮೆ ಪ್ರಕರಣ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ಗೆ ಸೂಚಿಸಿತ್ತು. ಬುಧವಾರ ಹೈಕೋರ್ಟ್ ಮತ್ತೊಮ್ಮೆ ವಿಚಾರಣೆ ನಡೆಸಿ, ಈ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಜಬಲ್ಪುರ (ಮಧ್ಯ ಪ್ರದೇಶ): </strong>ಬಿಜೆಪಿ ಶಾಸಕ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಸಮಿತಿಯ ಅಧ್ಯಕ್ಷಗೌರಿ ಶಂಕರ್ ಬಿಸೆನ್ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆಮಧ್ಯ ಪ್ರದೇಶ ಹೈಕೋರ್ಟ್ಬುಧವಾರ ಮತ್ತೊಮ್ಮೆ ನಿರ್ದೇಶನ ನೀಡಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಬಿಸೇನ್ ವಿರುದ್ಧ ಇದೆ.</p>.<p class="bodytext">ಬಿಸೆನ್ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಲು ಕೋರಿ ಶಾಸಕ ಕಿಶೋರ್ ಸಮರೀತೆ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶ ರವಿ ಮಾಲಿಮತ್ ಮತ್ತು ನ್ಯಾಯಧೀಶ ವಿಶಾಲ್ ಮಿಶ್ರಾ ಅವರು ತಿರಸ್ಕರಿಸಿದರು.</p>.<p class="bodytext">226 ವಿಧಿ ಅನ್ವಯ ಪಿಐಎಲ್ಅನ್ನು ಸಲ್ಲಿಸಲಾಗಿದೆ. ಆದ್ದರಿಂದ, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಆರೋಪಗಳ ವಿಚಾರಣೆ ನಡೆಸಲು ನಮಗೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.</p>.<p class="bodytext">ಈ ಹಿಂದೆಯೂ ಹೈಕೋರ್ಟ್ ಇದೇ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಬಿಸೇನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮತ್ತೊಮ್ಮೆ ಪ್ರಕರಣ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ಗೆ ಸೂಚಿಸಿತ್ತು. ಬುಧವಾರ ಹೈಕೋರ್ಟ್ ಮತ್ತೊಮ್ಮೆ ವಿಚಾರಣೆ ನಡೆಸಿ, ಈ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>