ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಜನರಿಂದ ನೇರವಾಗಿ ಶಾಸನಸಭೆಗೆ ಆಯ್ಕೆಯಾಗಲು ಕ್ಷೇತ್ರವನ್ನು ಆರಿಸಿಕೊಳ್ಳಲಿ. ಅದೇ ಕ್ಷೇತ್ರದಿಂದ ಅವರ ವಿರುದ್ಧ ನಾನು ಸ್ಪರ್ಧೆ ಮಾಡುತ್ತೇನೆ. ನಾನು ಕಠಿಣ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಚುನಾವಣೆಯನ್ನು ಗೆಲ್ಲುತ್ತೇನೆ. ಆಗ ಅವರಿಗೆ ಜನರ ಶಕ್ತಿ ತಿಳಿಯಲಿದೆ' ಎಂದು ಹೇಳಿದರು.