ಇಂದೋರ್: ಅಂಕಪಟ್ಟಿ ನೀಡಲು ವಿಳಂಬವಾಗಿದ್ದಕ್ಕೆ ಹಳೆಯ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಘಟನೆಯಲ್ಲಿ ಗಾಯಗೊಂಡಿದ್ದ ಇಲ್ಲಿನ ಬಿ.ಎಂ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲೆ ಡಾ. ವಿಮುಕ್ತ ಶರ್ಮಾ ಅವರು ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಶುತೋಷ್ ಶ್ರೀವಾಸ್ತವ (24) ಎಂಬ ವಿದ್ಯಾರ್ಥಿ ವಿಮುಕ್ತ ಅವರ ಮೇಲೆ ಇದೇ 20ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇದರಿಂದ ಶೇ 80ರಷ್ಟು ಸುಟ್ಟ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಪಿಯನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭಾಗವತ್ ಸಿಂಗ್ ವಿರ್ಡೆ ಮಾಹಿತಿ ನೀಡಿದ್ದಾರೆ.
ವಿಚಾರಣೆ ವೇಳೆ ವಿದ್ಯಾರ್ಥಿ, 2022ರ ಜುಲೈನಲ್ಲಿ ಉತ್ತೀರ್ಣರಾದ ಬಿ.ಫಾರ್ಮಾ ಪರೀಕ್ಷೆಯ ಅಂಕಪಟ್ಟಿಯನ್ನು ಕಾಲೇಜು ಅಧಿಕಾರಿಗಳು ಹಸ್ತಾಂತರಿಸಲಿಲ್ಲ ಎಂದಿದ್ದಾನೆ. ಆದರೆ, ಕಾಲೇಜು ಆಡಳಿತ ಮಂಡಳಿಯು ಈ ಹೇಳಿಕೆಯನ್ನು ಸುಳ್ಳು ಎಂದಿದ್ದು, ಆತ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾನೆ. ಅಲ್ಲದೆ ಅಂಕಪಟ್ಟಿ ಸಂಗ್ರಹಿಸಲು ಪದೇ ಪದೇ ತಿಳಿಸಿದ್ದರೂ ಆತ ಅದನ್ನು ಸಂಗ್ರಹಿಸಿಕೊಳ್ಳಲಿಲ್ಲ ಎಂದು ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.