<p class="title"><strong>ದೇವಾಸ್, ಮಧ್ಯಪ್ರದೇಶ:</strong> ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಕೋಲುಗಳಿಂದ ಥಳಿಸಿ ನಾಯಿಯೊಂದನ್ನು ಹತ್ಯೆ ಮಾಡಿದ ಆರೋಪದ ಮೇಲೆ ಇಬ್ಬರು ಪೌರ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.</p>.<p class="title">ಜಿಲ್ಲಾ ಕೇಂದ್ರದಿಂದ 110 ಕಿ.ಮೀ. ದೂರದಲ್ಲಿರುವ ಖಟೇಗಾಂವ್ ಪಟ್ಟಣದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಈ ಘಟನೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.</p>.<p class="title">ಕೋಲುಗಳಿಂದ ಬಡಿದು ನಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯವೆಸಗಿದ ಇಬ್ಬರು ದಿನಗೂಲಿ ನೌಕರರನ್ನು ಸ್ಥಳೀಯ ನಾಗರಿಕ ಸಂಸ್ಥೆಯು ಅಮಾನತುಗೊಳಿಸಿದೆ ಎಂದು ಖಟೇಗಾಂವ್ ನಗರ ಪರಿಷತ್ನ ಮುಖ್ಯ ನಗರ ಪಾಲಿಕೆ ಅಧಿಕಾರಿ (ಸಿಎಂಓ) ಅನಿಲ್ ಜೋಶಿ ಮಾಹಿತಿ ನೀಡಿದರು.</p>.<p class="title">ಇಬ್ಬರೂ ಕಾರ್ಮಿಕರು ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಕಾಲೋನಿಯೊಂದಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ನಾಯಿಯನ್ನು ಹೊಡೆದು ಕೊಂದಿದ್ದಾರೆ ಎಂದು ಅವರು ಹೇಳಿದರು.</p>.<p class="bodytext">ಐಪಿಸಿ ಸೆಕ್ಷನ್ ಮತ್ತು ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸಂಬಂಧಿತ ನಿಯಮಗಳ ಅಡಿಯಲ್ಲಿ ಇಬ್ಬರೂ ಪೌರ ಕಾರ್ಮಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೂರ್ಯಕಾಂತ್ ಶರ್ಮಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ದೇವಾಸ್, ಮಧ್ಯಪ್ರದೇಶ:</strong> ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಕೋಲುಗಳಿಂದ ಥಳಿಸಿ ನಾಯಿಯೊಂದನ್ನು ಹತ್ಯೆ ಮಾಡಿದ ಆರೋಪದ ಮೇಲೆ ಇಬ್ಬರು ಪೌರ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.</p>.<p class="title">ಜಿಲ್ಲಾ ಕೇಂದ್ರದಿಂದ 110 ಕಿ.ಮೀ. ದೂರದಲ್ಲಿರುವ ಖಟೇಗಾಂವ್ ಪಟ್ಟಣದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಈ ಘಟನೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.</p>.<p class="title">ಕೋಲುಗಳಿಂದ ಬಡಿದು ನಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯವೆಸಗಿದ ಇಬ್ಬರು ದಿನಗೂಲಿ ನೌಕರರನ್ನು ಸ್ಥಳೀಯ ನಾಗರಿಕ ಸಂಸ್ಥೆಯು ಅಮಾನತುಗೊಳಿಸಿದೆ ಎಂದು ಖಟೇಗಾಂವ್ ನಗರ ಪರಿಷತ್ನ ಮುಖ್ಯ ನಗರ ಪಾಲಿಕೆ ಅಧಿಕಾರಿ (ಸಿಎಂಓ) ಅನಿಲ್ ಜೋಶಿ ಮಾಹಿತಿ ನೀಡಿದರು.</p>.<p class="title">ಇಬ್ಬರೂ ಕಾರ್ಮಿಕರು ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಕಾಲೋನಿಯೊಂದಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ನಾಯಿಯನ್ನು ಹೊಡೆದು ಕೊಂದಿದ್ದಾರೆ ಎಂದು ಅವರು ಹೇಳಿದರು.</p>.<p class="bodytext">ಐಪಿಸಿ ಸೆಕ್ಷನ್ ಮತ್ತು ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸಂಬಂಧಿತ ನಿಯಮಗಳ ಅಡಿಯಲ್ಲಿ ಇಬ್ಬರೂ ಪೌರ ಕಾರ್ಮಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೂರ್ಯಕಾಂತ್ ಶರ್ಮಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>