ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕಗಳಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ಬೀರ್ ಸಿಂಗ್ ಬುಧವಾರ ಎನ್ಐಎ ಮುಂದೆ ಹಾಜರಾದರು.
ದಕ್ಷಿಣ ಮುಂಬೈನಲ್ಲಿರುವ ಎನ್ಐಎ ಕಚೇರಿಗೆ ತೆರಳಿದ ಸಿಂಗ್ ಅವರು, ತಮ್ಮ ಹೇಳಿಕೆ ದಾಖಲಿಸಿದ್ದಾರೆ.
ಫೆ. 25ರಂದು ಅಂಬಾನಿ ನಿವಾಸದ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆಯಾಗಿತ್ತು. ಕೆಲ ದಿನಗಳ ನಂತರ ಠಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೆನ್ ಅವರ ಹತ್ಯೆಯಾಗಿತ್ತು. ಈ ಘಟನೆ ನಂತರ ಪರಮ್ಬೀರ್ ಸಿಂಗ್ ಅವರನ್ನು ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ಕೆಳಗಿಳಿಸಲಾಯಿತು.
ಸದ್ಯ ಅವರು ಹೋಮ್ ಗಾರ್ಡ್ಸ್ನ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.