ಮುಲಾಯಂ ಸಿಂಗ್ ಸೊಸೆ ಅಪರ್ಣಾ ಯಾದವ್ರಿಂದ ರಾಮ ಮಂದಿರಕ್ಕೆ ₹11 ಲಕ್ಷ ದೇಣಿಗೆ
ಲಖನೌ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ₹11 ಲಕ್ಷ ದೇಣಿಗೆ ನೀಡಿದ್ದಾರೆ.
ನಾನಿದನ್ನು ಸ್ವ ಇಚ್ಛೆಯಿಂದ ನೀಡಿದ್ದೇನೆ. ನನ್ನ ಕುಟುಂಬ ಮಾಡಿದ್ದಕ್ಕೆ ನಾನು ಜವಾಬ್ದಾರಿಯಾಗಲಾರೆ. ಹಿಂದಿನದ್ದು ಎಂದಿಗೂ ಭವಿಷ್ಯಕ್ಕೆ ಸಮನಾಗಿರುವುದಿಲ್ಲ ಎಂದು ಅಪರ್ಣಾ ಹೇಳಿರುವುದಾಗಿ ‘ಎಎನ್ಐ’ ಟ್ವೀಟ್ ಮಾಡಿದೆ.
ಓದಿ: ದೇಶದ್ರೋಹದ ವಿಚಾರದಲ್ಲಿ ಸಿದ್ದು, ಪಿಎಫ್ಐ ಒಂದೇ: ಈಶ್ವರಪ್ಪ
Aparna Yadav, daughter-in-law of Samajwadi Party leader Mulayam Singh Yadav, donates Rs 11 lakhs for the construction of Ram temple in Ayodhya.
"I have done it willingly. I cannot take responsibility for what my family has done. Past never equals the future," she said (19.02) pic.twitter.com/GLPBszcRzc
— ANI UP (@ANINewsUP) February 20, 2021
ಓದಿ: ಮಂದಿರ ನಿರ್ಮಾಣಕ್ಕಲ್ಲ, ಹಣ ದುರ್ಬಳಕೆಗೆ ವಿರೋಧ: ಎಚ್.ಡಿ. ಕುಮಾರಸ್ವಾಮಿ
ರಾಮನಲ್ಲಿ ನಮಗೆ ನಂಬಿಕೆ ಹಾಗೂ ಗೌರವ ಇದೆ. ಹೀಗಾಗಿ ಸ್ವಯಂಪ್ರೇರಿತವಾಗಿ ನಾನು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ₹11 ಲಕ್ಷ ದೇಣಿಗೆ ನೀಡಿದ್ದೇನೆ. ರಾಮ ಭಾರತದ ಗುಣಲಕ್ಷಣ, ಮೌಲ್ಯಗಳು ಹಾಗೂ ನಂಬಿಕೆಯ ಕೇಂದ್ರ ಬಿಂದು. ಪ್ರತಿಯೊಬ್ಬ ಭಾರತೀಯನೂ ದೇಣಿಗೆ ನೀಡಬೇಕು ಎಂದು ನಾನು ಭಾವಿಸುತ್ತೇನೆ. ನಾನೂ ದೇಣಿಗೆ ನೀಡಿದ್ದೇನೆ ಎಂದು ಅಪರ್ಣಾ ಹೇಳಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.