ರಾಮನಲ್ಲಿ ನಮಗೆ ನಂಬಿಕೆ ಹಾಗೂ ಗೌರವ ಇದೆ. ಹೀಗಾಗಿ ಸ್ವಯಂಪ್ರೇರಿತವಾಗಿ ನಾನು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ₹11 ಲಕ್ಷ ದೇಣಿಗೆ ನೀಡಿದ್ದೇನೆ. ರಾಮ ಭಾರತದ ಗುಣಲಕ್ಷಣ, ಮೌಲ್ಯಗಳು ಹಾಗೂ ನಂಬಿಕೆಯ ಕೇಂದ್ರ ಬಿಂದು. ಪ್ರತಿಯೊಬ್ಬ ಭಾರತೀಯನೂ ದೇಣಿಗೆ ನೀಡಬೇಕು ಎಂದು ನಾನು ಭಾವಿಸುತ್ತೇನೆ. ನಾನೂ ದೇಣಿಗೆ ನೀಡಿದ್ದೇನೆ ಎಂದು ಅಪರ್ಣಾ ಹೇಳಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.