ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದಿಂದ ಭಾರತೀಯ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಮುಲಾಯಂ ಸಿಂಗ್ ಯಾದವ್ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಲಾಗಿದ್ದು, ಮುಲಾಯಂ ಅವರಿಗೆ ಸದ್ಗತಿ ದೊರೆಯಲಿ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದೆ.
समाजवादी पार्टी के संरक्षक, देश के पूर्व रक्षा मंत्री और उत्तर प्रदेश के पूर्व मुख्यमंत्री श्री मुलायम सिंह यादव जी का निधन भारतीय राजनीति के लिए अपूरणीय क्षति है।
— Congress (@INCIndia) October 10, 2022
ईश्वर उन्हें अपने श्रीचरणों में स्थान दें और उनके परिवार एवं समर्थकों को यह दुःख सहने की शक्ति प्रदान करें। pic.twitter.com/Ml9v8QA63E
ಮುಲಾಯಂ ನಿಧನಕ್ಕೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂದಿ ವಾದ್ರಾ, ರಕ್ಷಣಾ ಸಚಿವರಾಗಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಲಾಯಂ ಭಾರತೀಯ ರಾಜಕೀಯಕ್ಕೆ ನೀಡಿರುವ ಕೊಡುಗೆ ಎಂದಿಗೂ ಅವಿಸ್ಮರಣೀಯ ಎಂದು ಹೇಳಿದರು.
श्री मुलायम सिंह यादव जी के निधन का दुखद समाचार मिला। भारतीय राजनीति में उप्र के पूर्व मुख्यमंत्री, भारत सरकार के रक्षामंत्री व सामाजिक न्याय के सशक्त पैरोकार के रूप में उनका अतुलनीय योगदान हमेशा याद रखा जाएगा।@yadavakhilesh व अन्य सभी प्रियजनों के प्रति मेरी गहरी शोक संवेदनाएं
— Priyanka Gandhi Vadra (@priyankagandhi) October 10, 2022
ಮುಲಾಯಂ ಅಗಲಿಕೆಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಲಾಯಂ ಅಧಿಕಾರವಧಿಯು ಪರಿಣಾಮಕಾರಿಯಾಗಿತ್ತು. ಎರಡು ಸಂದರ್ಭಗಳಲ್ಲಿ ರಾಷ್ಟ್ರೀಯ ನಾಯಕತ್ವ ವಹಿಸಿದ್ದರು. ಮಾಜಿ ಪ್ರಧಾನಿಗಳಾದ ದೇವೇಗೌಡ ಮತ್ತು ಗುಜ್ರಾಲ್ ಸರ್ಕಾರಗಳಲ್ಲಿ ರಕ್ಷಣಾ ಸಚಿವರಾಗಿ ಮತ್ತು 2002ರಲ್ಲಿ ರಾಷ್ಟ್ರಪತಿ ಹುದ್ದೆಗೆ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹೆಸರನ್ನು ಪ್ರಸ್ತಾಪಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.
Mulayam Singh Yadav was a stalwart Lohiaite but had admirers across political spectrum. His tenures as CM of UP were very consequential. He played a key national role on 2 occasions: Deve Gowda & Gujral govts as Defence Min,& in 2002 when he proposed APJ Abdul Kalam for President
— Jairam Ramesh (@Jairam_Ramesh) October 10, 2022
ನಾನು ಮಾಜಿ ರಕ್ಷಣಾ ಸಚಿವ ಮುಲಾಯಂ ಸಿಂಗ್ ಅವರನ್ನು ವಿಶ್ವಸಂಸ್ಥೆಯಲ್ಲಿ ಭೇಟಿಯಾಗಿದ್ದೆ. ನಂತರ ಲೋಕಸಭೆಯಲ್ಲಿ ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡಿದ್ದೆ. ರಾಜಕೀಯ ದಿಗ್ಗಜರೊಬ್ಬರು ನಮ್ಮನ್ನು ಅಗಲಿದ್ದಾರೆ. ಇದು ಎಲ್ಲ ಭಾರತೀಯರಿಗೆ ತುಂಬಲಾರದ ನಷ್ಟವಾಗಿದೆ. ಓಂ ಶಾಂತಿ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಶಶಿ ತರೂರ್ ಹೇಳಿದ್ದಾರೆ.
Profound condolences to @yadavakhilesh on the passing of his eminent father Mulayam Singh Yadav ji. I had met the former DefenceMinister at the @UN & subsequently exchanged thoughts with him at the LokSabha. A political giant has passed. A great loss to all Indians. OM Shanti. pic.twitter.com/WPRkOF8MOX
— Shashi Tharoor (@ShashiTharoor) October 10, 2022
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.