<p class="title"><strong>ಶ್ರೀನಗರ: </strong>ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅಧಿಕೃತ ಕಾರ್ಯಕ್ರಮಗಳ ವೇಳೆ ನಡೆಯಬಹುದಾದ ಸಂಭವನೀಯ ಅಡಚಣೆ ತಪ್ಪಿಸಲು ಕಟ್ಟೆಚ್ಚರ ವಹಿಸಲಾಗಿದೆ.</p>.<p class="title">ಶ್ರೀನಗರವಲ್ಲದೆ, ಭದ್ರತೆಯನ್ನು ಕಾಶ್ಮೀರದ ಇತರೆಡೆಯೂ ಬಿಗಿಗೊಳಿಸಲಾಗಿದೆ. ಮುಖ್ಯವಾಗಿ ಶ್ರೀನಗರ–ಜಮ್ಮು ಮತ್ತು ಶ್ರೀನಗರ–ಬರಾಮುಲ್ಲ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆಯೂ ಭದ್ರತೆ ಬಲಪಡಿಸಲಾಗಿದೆ. ಶಸ್ತ್ರಸಜ್ಜಿತ ಸಿಬ್ಬಂದಿ, ಪೊಲೀಸರನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ನಿಯೋಜಿಸಲಾಗಿದೆ.</p>.<p class="title">ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ಅಗತ್ಯ ಕ್ರಮವಹಿಸಲಾಗಿದೆ. ಮುಖ್ಯ ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸಮೀಪದಲ್ಲಿ ಇರುವ ಎತ್ತರದ ಕಟ್ಟಡಗಳಲ್ಲಿ ಶಾರ್ಪ್ ಶೂಟರ್ಗಳನ್ನು ನಿಯೋಜಿಸಲಾಗಿದೆ. ಜತೆಗೆ ಅರೆ ಸೇನಾಪಡೆ, ಸಿಆರ್ಪಿಎಫ್ ಯೋಧರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಒಂದು ವೇಳೆ ಹವಾಮಾನದಲ್ಲಿ ಪ್ರತಿಕೂಲ ಬದಲಾವಣೆಗಳು ಕಂಡುಬಂದರೂ ಪೂರಕವಾಗಿ ಪರ್ಯಾಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶ್ರೀನಗರ: </strong>ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅಧಿಕೃತ ಕಾರ್ಯಕ್ರಮಗಳ ವೇಳೆ ನಡೆಯಬಹುದಾದ ಸಂಭವನೀಯ ಅಡಚಣೆ ತಪ್ಪಿಸಲು ಕಟ್ಟೆಚ್ಚರ ವಹಿಸಲಾಗಿದೆ.</p>.<p class="title">ಶ್ರೀನಗರವಲ್ಲದೆ, ಭದ್ರತೆಯನ್ನು ಕಾಶ್ಮೀರದ ಇತರೆಡೆಯೂ ಬಿಗಿಗೊಳಿಸಲಾಗಿದೆ. ಮುಖ್ಯವಾಗಿ ಶ್ರೀನಗರ–ಜಮ್ಮು ಮತ್ತು ಶ್ರೀನಗರ–ಬರಾಮುಲ್ಲ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆಯೂ ಭದ್ರತೆ ಬಲಪಡಿಸಲಾಗಿದೆ. ಶಸ್ತ್ರಸಜ್ಜಿತ ಸಿಬ್ಬಂದಿ, ಪೊಲೀಸರನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ನಿಯೋಜಿಸಲಾಗಿದೆ.</p>.<p class="title">ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ಅಗತ್ಯ ಕ್ರಮವಹಿಸಲಾಗಿದೆ. ಮುಖ್ಯ ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸಮೀಪದಲ್ಲಿ ಇರುವ ಎತ್ತರದ ಕಟ್ಟಡಗಳಲ್ಲಿ ಶಾರ್ಪ್ ಶೂಟರ್ಗಳನ್ನು ನಿಯೋಜಿಸಲಾಗಿದೆ. ಜತೆಗೆ ಅರೆ ಸೇನಾಪಡೆ, ಸಿಆರ್ಪಿಎಫ್ ಯೋಧರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಒಂದು ವೇಳೆ ಹವಾಮಾನದಲ್ಲಿ ಪ್ರತಿಕೂಲ ಬದಲಾವಣೆಗಳು ಕಂಡುಬಂದರೂ ಪೂರಕವಾಗಿ ಪರ್ಯಾಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>