ಸಾಕ್ಷ್ಯಾಧಾರಗಳ ಕೊರತೆಯಿಂದ ಹಾಗೂ ‘ಸಮಂಜಸ ಅನುಮಾನ’ವನ್ನೂ ಮೀರಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದ್ದರಿಂದ ಛೋಟಾ ರಾಜನ್ ಹಾಗೂ ಇತರರನ್ನು ವಿಶೇಷ ನ್ಯಾಯಾಧೀಶ ಎ.ಎಂ. ಪಾಟೀಲ್ ಅವರು ಖುಲಾಸೆಗೊಳಿಸಿದ್ದಾರೆ. ಅಲ್ಲದೇ, ‘ಕೊಲೆ ಸಂಚಿನಲ್ಲಿ ರಾಜನ್ ಪಾತ್ರವನ್ನು ಸಾಬೀತುಪಡಿಸಲೂ ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ನ್ಯಾಯಾಧೀಶರು ಹೇಳಿದ್ದಾರೆ.