ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ದುರಂತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ

ಅಕ್ಷರ ಗಾತ್ರ

ಮುಂಬೈ: ಮುಂಬೈನ ಚೆಂಬೂರ್ ಹಾಗೂ ವಿಕ್ರೋಲಿಯದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಅಲ್ಲದೆ ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಗೋಡೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಕಂಬನಿ ಮಿಡಿದಿದ್ದು, ಗಾಯಗೊಂಡವರು ಶೀಘ್ರವೇ ಗುಣಮುಖರಾಗಲು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ನೀಡುವುದಾಗಿ ತಿಳಿಸಿದ್ದಾರೆ.

ಚೆಂಬೂರ್ ಹಾಗೂ ವಿಕ್ರೋಲಿಯ ದುರಂತಗಳಲ್ಲಿ ಇದುವರೆಗೆ 25 ಮಂದಿ ಮೃತಪಟ್ಟಿದ್ದಾರೆ.

ಮುಂಬೈಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವ ಅಸ್ತವ್ಯಸ್ತಗೊಂಡಿದೆ. ಮುಂಬೈ ಉಪನಗರ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT