ಮಹಾರಾಷ್ಟ್ರ ನವನಿರ್ಮಾಣ ಸೇನಾದ ಮುಖಂಡ ರಾಜ್ ಠಾಕ್ರೆ ಅವರು, ಮಸೀದಿ ಹಾಗೂ ಇತರ ಸ್ಥಳಗಳಲ್ಲಿನ ಧ್ವನಿವರ್ಧಕಗಳ ಶಬ್ದವು ನಿಯಮಗಳಂತೆ ಮಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕಳೆದ ಏಪ್ರಿಲ್ನಲ್ಲಿ ಆಗ್ರಹಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘಟನೆಯ ಕಾರ್ಯಕರ್ತರು ಮಸೀದಿಗಳ ಮುಂದೆ ಪ್ರತಿಭಟನೆ ರೂಪದಲ್ಲಿ ಹಿಂದೂ ಶ್ಲೋಕಗಳನ್ನು ಪಠಿಸುವುದಾಗಿ ಎಚ್ಚರಿಸಿದ್ದರು.