<p><strong>ನವಸಾರಿ, ಗುಜರಾತ್:</strong> 26/11 ಮುಂಬೈ ಭಯೋತ್ಪಾದನಾ ದಾಳಿಗೂ ಮುನ್ನ ಉಗ್ರರು ಐವರು ಮೀನುಗಾರರನ್ನು ಹತ್ಯೆಗೈದಿದ್ದರು. ಇದೀಗ ಮುಂಬೈ ದಾಳಿ ನಡೆದ 12 ವರ್ಷಗಳ ಬಳಿಕ ಮೂವರು ಮೀನುಗಾರರ ಕುಟುಂಬದವರಿಗೆ ಪರಿಹಾರಧನ ಲಭಿಸಿದೆ. ಗುಜರಾತ್ ಸರ್ಕಾರವು ತಲಾ ₹5 ಲಕ್ಷ ಪರಿಹಾರ ಧನ ವಿತರಿಸಿದೆ.</p>.<p>ಕ್ಯಾಪ್ಟನ್ ಅಮರ್ಸಿಂಗ್ ಸೋಲಂಕಿ ಸೇರಿದಂತೆ ಇಬ್ಬರು ಮೀನುಗಾರರ ಕುಟುಂಬಸ್ಥರಿಗೆ ವಿವಿಧ ಅಧಿಕಾರಿಗಳು ಈಗಾಗಲೇ ಪರಿಹಾರ ಧನ ನೀಡಿದ್ದರು. ಹಾಗಾಗಿ ಈಗ ಮೂವರು ಮೀನುಗಾರರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ.</p>.<p>ಮೀನುಗಾರರಾದ ನಾತು ರಾಥೋಡ್, ಮುಖೇಶ್ ರಾಥೋಡ್ ಮತ್ತು ಬಲ್ವಂತ್ ತಾಂಡೇಲ್ ಗುಜರಾತ್ನ ಜಲಾಲ್ಪುರದ ವ್ಯಾನ್ಸಿ ಗ್ರಾಮದ ನಿವಾಸಿಗಳಾಗಿದ್ದರು.</p>.<p>ಈ ಮೂವರು ಮೀನುಗಾರರ ಕುಟುಂಬ ಸದಸ್ಯರಿಗೆ ನಿಗದಿತ ಠೇವಣಿ ರೂಪದಲ್ಲಿ ಕಳೆದ ವಾರ ತಲಾ ₹5 ಲಕ್ಷ ನೀಡಲಾಗಿದೆ. ಸಂಬಂಧಿಸಿದ ದಾಖಲೆಗಳನ್ನು ಕುಟುಂಸ್ಥರಿಗೆ ಶುಕ್ರವಾರ ಹಸ್ತಾಂತರ ಮಾಡಲಾಯಿತು. ಈ ಹಣವನ್ನು ಮೂರು ವರ್ಷಗಳ ಕಾಲ ನಿಗದಿತ ಠೇವಣಿಯಲ್ಲಿ ಇರಿಸಲಾಗಿದೆ ಎಂದು ನವಸಾರಿ ಜಿಲ್ಲೆಯ ವಿಪತ್ತು ನಿರ್ವಹಣಾ ಇಲಾಖೆಯ ಕಂದಾಯ ಅಧಿಕಾರಿ ರೋಶ್ನಿ ಪಟೇಲ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಸಾರಿ, ಗುಜರಾತ್:</strong> 26/11 ಮುಂಬೈ ಭಯೋತ್ಪಾದನಾ ದಾಳಿಗೂ ಮುನ್ನ ಉಗ್ರರು ಐವರು ಮೀನುಗಾರರನ್ನು ಹತ್ಯೆಗೈದಿದ್ದರು. ಇದೀಗ ಮುಂಬೈ ದಾಳಿ ನಡೆದ 12 ವರ್ಷಗಳ ಬಳಿಕ ಮೂವರು ಮೀನುಗಾರರ ಕುಟುಂಬದವರಿಗೆ ಪರಿಹಾರಧನ ಲಭಿಸಿದೆ. ಗುಜರಾತ್ ಸರ್ಕಾರವು ತಲಾ ₹5 ಲಕ್ಷ ಪರಿಹಾರ ಧನ ವಿತರಿಸಿದೆ.</p>.<p>ಕ್ಯಾಪ್ಟನ್ ಅಮರ್ಸಿಂಗ್ ಸೋಲಂಕಿ ಸೇರಿದಂತೆ ಇಬ್ಬರು ಮೀನುಗಾರರ ಕುಟುಂಬಸ್ಥರಿಗೆ ವಿವಿಧ ಅಧಿಕಾರಿಗಳು ಈಗಾಗಲೇ ಪರಿಹಾರ ಧನ ನೀಡಿದ್ದರು. ಹಾಗಾಗಿ ಈಗ ಮೂವರು ಮೀನುಗಾರರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ.</p>.<p>ಮೀನುಗಾರರಾದ ನಾತು ರಾಥೋಡ್, ಮುಖೇಶ್ ರಾಥೋಡ್ ಮತ್ತು ಬಲ್ವಂತ್ ತಾಂಡೇಲ್ ಗುಜರಾತ್ನ ಜಲಾಲ್ಪುರದ ವ್ಯಾನ್ಸಿ ಗ್ರಾಮದ ನಿವಾಸಿಗಳಾಗಿದ್ದರು.</p>.<p>ಈ ಮೂವರು ಮೀನುಗಾರರ ಕುಟುಂಬ ಸದಸ್ಯರಿಗೆ ನಿಗದಿತ ಠೇವಣಿ ರೂಪದಲ್ಲಿ ಕಳೆದ ವಾರ ತಲಾ ₹5 ಲಕ್ಷ ನೀಡಲಾಗಿದೆ. ಸಂಬಂಧಿಸಿದ ದಾಖಲೆಗಳನ್ನು ಕುಟುಂಸ್ಥರಿಗೆ ಶುಕ್ರವಾರ ಹಸ್ತಾಂತರ ಮಾಡಲಾಯಿತು. ಈ ಹಣವನ್ನು ಮೂರು ವರ್ಷಗಳ ಕಾಲ ನಿಗದಿತ ಠೇವಣಿಯಲ್ಲಿ ಇರಿಸಲಾಗಿದೆ ಎಂದು ನವಸಾರಿ ಜಿಲ್ಲೆಯ ವಿಪತ್ತು ನಿರ್ವಹಣಾ ಇಲಾಖೆಯ ಕಂದಾಯ ಅಧಿಕಾರಿ ರೋಶ್ನಿ ಪಟೇಲ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>