ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26/11ರ ದುಷ್ಕರ್ಮಿಗಳನ್ನು ನ್ಯಾಯಾಂಗದ ಮುಂದೆ ತರಲೇಬೇಕು: ಜೈಶಂಕರ್‌

Last Updated 26 ನವೆಂಬರ್ 2022, 7:32 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈನ 26/11 ಉಗ್ರ ಕೃತ್ಯದ ರೂವಾರಿಗಳನ್ನು ನ್ಯಾಯಾಂಗದ ಮುಂದೆ ತರಲೇಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಹೇಳಿದರು.

2008ರ ನವೆಂಬರ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಯ 14ನೇ ವರ್ಷದ ಸ್ಮರಣಾರ್ಥ ಟ್ವೀಟ್‌ ಮಾಡಿದ ಜೈಶಂಕರ್‌, ಭಯೋತ್ಪಾದನೆಯು ಮಾನವೀಯತೆಗೆ ತೊಡಕಾಗಿದೆ. 26/11 ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಸ್ಮರಣಾರ್ಥ ಇಂದು ವಿಶ್ವವು ಭಾರತದ ಜೊತೆಯಾಗಿದೆ ಎಂದರು.

ಉಗ್ರ ಕೃತ್ಯದ ಹಿಂದಿರುವ ರೂವಾರಿಗಳನ್ನು ಕಾನೂನಿನ ಅಡಿ ತರಲೇಬೇಕು. ಭಯೋತ್ಪಾದನಾ ದಾಳಿಯಿಂದ ಮೃತಪಟ್ಟ ವಿಶ್ವದ ಪ್ರತಿಯೊಬ್ಬ ವ್ಯಕ್ತಿಯನ್ನು ಗೌರವಾರ್ಥ ಸ್ಮರಿಸುತ್ತಿದ್ದೇವೆ. ಉಗ್ರರ ದಾಳಿಯಿಂದ ಆಘಾತಕ್ಕೆ ಒಳಗಾದ ವಿದೇಶಿ ಪ್ರಜೆಗಳಿಗೆ ಸಾಂತ್ವನ ಹೇಳುವುದು ಮತ್ತು ದುಷ್ಕರ್ಮಿಗಳನ್ನು ನ್ಯಾಯಾಂಗದ ಮುಂದೆ ತರಲು ಶ್ರಮಿಸುತ್ತಿರುವ ಅಂತರರಾಷ್ಟ್ರೀಯ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಭಯೋತ್ಪಾದನೆ ವಿಚಾರದಲ್ಲಿ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ನ್ಯಾಯ ಸಿಗುವ ವರೆಗೆ ನಮ್ಮ ಹೋರಾಟವನ್ನು ಬಿಟ್ಟುಬಿಡುವುದಿಲ್ಲ ಎಂದರು.

2008ರಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸುಮಾರು 140 ಭಾರತೀಯರು ಮತ್ತು 23 ರಾಷ್ಟ್ರಗಳ 26 ನಾಗರಿಕರು ಪ್ರಾಣ ಕಳೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT