ಹಿಂಸಾಚಾರದ ಎದುರು ನಿಲ್ಲುವುದನ್ನು ದೇಶ ಮುಂದುವರಿಸಲಿದೆ: ರಾಹುಲ್ ಗಾಂಧಿ

ನವದೆಹಲಿ: ‘ಹಿಂಸಾಚಾರದ ಎದುರು ನಿರ್ಭಯದಿಂದ ನಿಲ್ಲುವುದನ್ನು ಭಾರತವು ಮುಂದುವರಿಸಲಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ. 2008ರಲ್ಲಿ ಮುಂಬೈನಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ.
‘ಭಾರತವನ್ನು ರಕ್ಷಿಸಲು ಎಲ್ಲವನ್ನೂ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿ ನಮ್ಮ ದೇಶದ ಹೆಮ್ಮೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರು ಮತ್ತು ಸಾಮಾನ್ಯ ಜನರಿಗೆ ಗೌರವ ಸಲ್ಲಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
2008ರ ನವೆಂಬರ್ 26ರಂದು ಪಾಕಿಸ್ತಾನ ಮೂಲದ ಲಷ್ಕರ್–ಎ–ತೊಯಬಾ ಸಂಘಟನೆಯ 10 ಉಗ್ರರು ಜಲಮಾರ್ಗದಿಂದ ಮುಂಬೈ ತಲುಪಿ ನಾಗರಿಕ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 16 ಭದ್ರತಾ ಸಿಬ್ಬಂದಿ, 26 ವಿದೇಶಿಯರು ಸೇರಿ 166 ಜನರು ಸಾವಿಗೀಡಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.