ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಸಾಚಾರದ ಎದುರು ನಿಲ್ಲುವುದನ್ನು ದೇಶ ಮುಂದುವರಿಸಲಿದೆ: ರಾಹುಲ್‌ ಗಾಂಧಿ

Last Updated 26 ನವೆಂಬರ್ 2022, 10:56 IST
ಅಕ್ಷರ ಗಾತ್ರ

ನವದೆಹಲಿ: ‘ಹಿಂಸಾಚಾರದ ಎದುರುನಿರ್ಭಯದಿಂದ ನಿಲ್ಲುವುದನ್ನುಭಾರತವು ಮುಂದುವರಿಸಲಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶನಿವಾರ ಹೇಳಿದ್ದಾರೆ. 2008ರಲ್ಲಿ ಮುಂಬೈನಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಿಅವರು ಹೀಗೆ ಟ್ವೀಟ್‌ ಮಾಡಿದ್ದಾರೆ.

‘ಭಾರತವನ್ನು ರಕ್ಷಿಸಲು ಎಲ್ಲವನ್ನೂ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿ ನಮ್ಮ ದೇಶದ ಹೆಮ್ಮೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರು ಮತ್ತು ಸಾಮಾನ್ಯ ಜನರಿಗೆ ಗೌರವ ಸಲ್ಲಿಸುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

2008ರ ನವೆಂಬರ್‌ 26ರಂದು ಪಾಕಿಸ್ತಾನ ಮೂಲದ ಲಷ್ಕರ್‌–ಎ–ತೊಯಬಾ ಸಂಘಟನೆಯ 10 ಉಗ್ರರು ಜಲಮಾರ್ಗದಿಂದ ಮುಂಬೈ ತಲುಪಿ ನಾಗರಿಕ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 16 ಭದ್ರತಾ ಸಿಬ್ಬಂದಿ, 26 ವಿದೇಶಿಯರು ಸೇರಿ 166 ಜನರು ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT