ದಾಳಿಯ 14ನೇ ವರ್ಷಾಚರಣೆಯ ಅಂಗವಾಗಿ ದಕ್ಷಿಣ ಮುಂಬೈನ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಸಚಿವ ದೀಪಕ್ ಕೇಸರ್ಕರ್, ಮುಖ್ಯ ಕಾರ್ಯದರ್ಶಿ ಮನು ಕುಮಾರ್ ಶ್ರೀವಾಸ್ತವ್, ಡಿಜಿಪಿ ರಜನೀಶ್ ಸೇಠ್, ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.